ಆ್ಯಪ್ನಗರ

ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚು ಪಾವತಿಸಿ ಮೆಡಿಕಲ್ ಸಾಮಗ್ರಿಗಳ ಖರೀದಿ, ಸಿದ್ದರಾಮಯ್ಯ ಆರೋಪ

ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಮೆಡಿಕಲ್ ಸಾಮಗ್ರಿಗಳನ್ನು ಖರೀದಿ ಮಾಡಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಆರೋಪದ ಕುರಿತಾದ ವಿವರ ಇಲ್ಲಿದೆ.

Vijaya Karnataka Web 3 Jul 2020, 5:18 pm
ಬೆಂಗಳೂರು: ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚು ಪಾವತಿಸಿ ಮೆಡಿಕಲ್‌ ಸಾಮಗ್ರಿಗಳನ್ನು ಖರೀದಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಕೆಲವೊಂದು ದಾಖಲೆಗಳ ಜೊತೆಗೆ ಸರ್ಕಾರದ ವಿರುದ್ಧ ಆರೋಪ ಮಾಡಿದ ಅವರು ತನಿಖೆಗೆ ಆಗ್ರಹಿಸಿದ್ದಾರೆ.
Vijaya Karnataka Web siddaramayha


ಟ್ವಿಟ್ಟರ್‌ ಮೂಲಕ ಸರ್ಕಾರ ವಿರುದ್ಧ ಗಂಭೀರ ಆರೋಪ ಮಾಡಿದ ಅವರು ಈ ಕುರಿತಾಗಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಳ್ಳಾರಿ ಘಟನೆ ಅಮಾನವೀಯ, ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ


ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ? ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು ಎಂದಿದ್ದಾರೆ.


ಆರೋಪ ನಿರಾಕರಿಸಿದ ಸುಧಾಕರ್

ಸಿದ್ದರಾಮಯ್ಯ ಅವರು ಮಾಡಿರುವ ಆರೋಪವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ನಿರಾಕರಿಸಿದ್ದಾರೆ. ಈ ಕುರಿತಾಗಿ ಯಾವುದೇ ರೀತಿಯ ತನಿಖೆಗೂ ನಾವು ಸಿದ್ಧ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಹೀಗಿದ್ದರೂ ಸಿದ್ಧರಾಮಯ್ಯ ಮಾಡಿರುವ ಆರೋಪ ಆಶ್ಚರ್ಯ ತಂದಿದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ