ಆ್ಯಪ್ನಗರ

ಕೊರೊನಾ ಸಾವು-ನೋವುಗಳಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ! ಸಿದ್ದರಾಮಯ್ಯ ಕಿಡಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಇತರ ರಾಜ್ಯಗಳನ್ನು ಹಿಂದಿಕ್ಕಿ ನಂಬರ್‌ ಒನ್‌ ಆಗಲು ಹೊರಟಿದೆ ಇಂತಹ ಸಂದರ್ಭದಲ್ಲಿ ನಾವು ಸುಮ್ಮನಿರಬೇಕಾ ಎಂದು ಪ್ರಶ್ನಿಸಿದ್ದಾರೆ.

Vijaya Karnataka Web 2 Aug 2020, 3:21 pm
ಬೆಂಗಳೂರು: ಕೊರೊನಾ ಸಾವು ನೋವುಗಳಲ್ಲಿ ತಮಿಳುನಾಡು, ಮಹಾರಾಷ್ಟ್ರವನ್ನು ಮೀರಿಸಿ ಕರ್ನಾಟಕ ನಂಬರ್‌ 1 ಆಗಲು ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Vijaya Karnataka Web siddaramayha


ಸರಣಿ ಟ್ವೀಟ್‌ಗಳ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು “ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು.ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ?” ಎಂದಿದ್ದಾರೆ.

ವೆಂಟಿಲೇಟರ್ ರಫ್ತಿಗೆ ಅವಕಾಶ, ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ


ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ.

ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸದ ಪದಾಧಿಕಾರಿಗಳ ಪಟ್ಟಿ !


ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಬಿಎಸ್‌ ಯಡಿಯೂರಪ್ಪ ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಟ್ವೀಟ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


ನಮ್ಮಿಂದ ಸಹಕಾರ ನಿರೀಕ್ಷಿಸುವ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಬಿಜೆಪಿ ಯಾಕೆ‌ ಸಹಕಾರ ಕೊಡಲಿಲ್ಲ? ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ