ಆ್ಯಪ್ನಗರ

20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ? ಕೇಂದ್ರದ ಪ್ಯಾಕೇಜ್‌ಗೆ ಸಿದ್ದು ಲೇವಡಿ

ಕೇಂದ್ರ ಸರ್ಕಾರ ಪ್ರಕಟಿಸಿದ 20 ಲಕ್ಷ ಕೋಟಿ ಕೊರೊನಾ ವಿಶೇಷ ಪ್ಯಾಕೇಜ್ ಕುರಿತಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಅವರು ಹೇಳಿಕೆ ನೀಡಿದ್ದು ಹೀಗಿದೆ.

Vijaya Karnataka Web 21 May 2020, 5:43 pm
ಬೆಂಗಳೂರು: ಕೊರೊನಾ ಪರಿಹಾರವಾಗಿ ಕೇಂದ್ರ ಸರ್ಕಾರ ಪ್ರಕಟಿಸಿರುವ 20 ಲಕ್ಷ ಕೋಟಿ ಪ್ಯಾಕೇಜ್‌ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕೇಂದ್ರದ ಪ್ಯಾಕೇಜ್‌ನಲ್ಲಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web siddaramayha


ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ ನರೇಂದ್ರ ಮೋದಿ ಅವರ ಕೋರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಸರ್ಕಾರದ ಪ್ಯಾಕೇಜ್‌ ವಿರುದ್ಧ ವ್ಯಂಗ್ಯದ ರೂಪದಲ್ಲಿ ಕಿಡಿಕಾರಿದ್ದಾರೆ.

ಹೊರ ರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಬದಲು ಪರ್ಯಾಯ ವ್ಯವಸ್ಥೆ!


ಇನ್ನು ಕರ್ನಾಟಕ ಕಾಂಗ್ರೆಸ್ ಕೂಡಾ ಸರಣಿ ಟ್ವೀಟ್ ಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ದೇಶದ ಆರ್ಥಿಕತೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದೇ ರಿಸರ್ವ್ ಬ್ಯಾಂಕಿನ ಮೀಸಲು ಹಣವನ್ನು ಬಳಸಿಕೊಳ್ಳುವ ಯೋಚನೆ ಮಾಡಿದ್ದ ಮೋದಿ ಸರ್ಕಾರವು ಇದೀಗ ಎಲ್ಲ ಆರ್ಥಿಕ ತರ್ಕಗಳನ್ನೂ ಮೀರಿ 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿರುವುದನ್ನು ಅತ್ಯಂತ ಹಾಸ್ಯಾಸ್ಪದ ಸಂಗತಿ ಎಂದು ಟೀಕಿಸಿದೆ.

ಅಲ್ಲದೆ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರ ಖಾತೆಗೆ ವಾರ್ಷಿಕ ರೂ.72,000 ನೇರ ವರ್ಗಾವಣೆ ಮಾಡುವ 'ನ್ಯಾಯ' ಯೋಜನೆಯನ್ನು ಬಿಜೆಪಿ ಸರ್ಕಾರ 6 ತಿಂಗಳುಗಳ ಕಾಲ ಜಾರಿಗೆ ತರಬೇಕು. ಇದರಿಂದ ಮಾತ್ರ ದೀರ್ಘ ಕಾಲದ ಬದಲಾವಣೆ ಸಾಧ್ಯ ಎಂದು ಒತ್ತಾಯಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ