ಆ್ಯಪ್ನಗರ

ಸೋನಿಯಾ ಬಳಿಕ ರಾಹುಲ್ ಭೇಟಿ ನಿಗದಿ : ದೆಹಲಿಯಲ್ಲೇ ಉಳಿದುಕೊಂಡಿರುವ ಸಿದ್ದು

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಆಯ್ಕೆ ವಿಚಾರವಾಗಿ ಮಾತುಕತೆ ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಮಾತುಕತೆ ನಡೆಸಿದ್ದು ಬುಧವಾರ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

Vijaya Karnataka Web 14 Jan 2020, 9:46 pm
ಹೊಸದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಕುರಿತಾಗಿ ಸಿದ್ದರಾಮಯ್ಯ ಮಂಗಳವಾರ ದೆಹಲಿಯಲ್ಲಿ ಸೋನಿಯಾಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಿದ್ದು ಬುಧವಾರ ರಾಹುಲ್ ಗಾಂಧಿ ಜೊತಗೆ ಚರ್ಚೆ ನಡೆಸಲಿದ್ದಾರೆ.
Vijaya Karnataka Web congress leader siddaramaiah will meet rahul gandhi
ಸೋನಿಯಾ ಬಳಿಕ ರಾಹುಲ್ ಭೇಟಿ ನಿಗದಿ : ದೆಹಲಿಯಲ್ಲೇ ಉಳಿದುಕೊಂಡಿರುವ ಸಿದ್ದು


ಕೆಪಿಸಿಸಿ ಆಧ್ಯಕ್ಷ ಸ್ಥಾನ ಆಯ್ಕೆ ವಿಚಾರವಾಗಿ ರಾಜ್ಯ ನಾಯಕರ ನಡುವೆ ಗೊಂದಲ ತೀವ್ರಗೊಂಡ ವಿಚಾರವಾಗಿ ಹೈಕಮಾಂಡ್‌ ಬುಲಾವಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ.

ಅದಕ್ಕೂ ಮುನ್ನ ಸೋನಿಯಾ ಅವರ ಆಪ್ತ ಅಹಮ್ಮದ್ ಪಟೇಲ್‌ ಹಾಗೂ ಕೆ.ಸಿ ವೇಣುಗೋಪಾಲ್‌ ಜೊತೆಗೂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಬದಲಾಗಿ ಆಪ್ತ ಎಂಬಿ ಪಾಟೀಲ್‌ ಅವರನ್ನು ಆಯ್ಕೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.

ಮಾತುಕತೆಯ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ನೀವೇ ಮುಂದುವರಿಯಿರಿ ಎಂದು ಸೋನಿಯಾಗಾಂಧಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾಗಿ ಕೇಂದ್ರದ ಮುಖಂಡರ ಜೊತೆಗೆ ಚರ್ಚೆ ನಡೆಸಿ ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಗುರುವಾರ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದು ಪಕ್ಷ ಸಂಘಟನೆ ಹಾಗೂ ಇನ್ನಿತರ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ. ಈ ಕಾರಣಕ್ಕಾಗಿ ಮಂಗಳವಾರ ಅವರು ಬೆಂಗಳೂರಿಗೆ ಹಿಂತಿರುಗದೆ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ