ಆ್ಯಪ್ನಗರ

ರಾಜ್ಯ ಪ್ರವಾಸ ಕೈಗೊಳ್ಳಲಿರುವ ಕೆ ೖನಾಯಕರು

ಕೆಪಿಸಿಸಿಗೆ ಹೊಸ ಪದಾಧಿಕಾರಿಗಳ ನೇಮಕವಾಗುತ್ತಿದ್ದಂತೆ ಪ್ರದೇಶ ಕಾಂಗ್ರೆಸ್‌ನ ಪ್ರಮುಖರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಹಿರಿಯ ಕಾಂಗ್ರೆಸಿಗರ ಸಭೆಯಲ್ಲಿ ನಿರ್ಣಯವಾಗಿದೆ...

Vijaya Karnataka 27 Jun 2019, 5:00 am
ಬೆಂಗಳೂರು : ಕೆಪಿಸಿಸಿಗೆ ಹೊಸ ಪದಾಧಿಕಾರಿಗಳ ನೇಮಕವಾಗುತ್ತಿದ್ದಂತೆ ಪ್ರದೇಶ ಕಾಂಗ್ರೆಸ್‌ನ ಪ್ರಮುಖರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
Vijaya Karnataka Web congress-flag


ಹಿರಿಯ ಕಾಂಗ್ರೆಸಿಗರ ಸಭೆಯಲ್ಲಿ ನಿರ್ಣಯವಾಗಿದೆ. ಡಿಸಿಸಿ, ಬ್ಲಾಕ್‌, ಬೂತ್‌ ಸಮಿತಿಗಳನ್ನು ತಕ್ಷಣವೇ ವಿಸರ್ಜಿಸಿ ಪಕ್ಷದ ಕೆಲಸ ಮಾಡುವ ಪ್ರಾಮಾಣಿಕ ಆಸಕ್ತಿ ಇರುವವರನ್ನು ನೇಮಿಸಬೇಕು. ಈ ಸಮಿತಿಯವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಿಂಗಳಿಗೊಮ್ಮೆ ಸಭೆ ನಡೆಸುವುದು ಕಡ್ಡಾಯ. ಇದರ ಉಸ್ತುವಾರಿಗೆ 15 ಮುಖಂಡರ ಸಮಿತಿ ರಚಿಸಬೇಕು. ಗಾಂಧಿ ಜಯಂತಿ ದಿನ ಪಂಚಾಯಿತಿ ಮಟ್ಟದಲ್ಲಿ ಜನರೊಂದಿಗೆ ಸಂವಾದ ನಡೆಸಬೇಕು. ಪಕ್ಷ, ಸಮ್ಮಿಶ್ರ ಸರಕಾರ ಹಾಗೂ ನಾಯಕರ ವಿರುದ್ಧ ಹೇಳಿಕೆ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂಬ ನಿರ್ದೇಶನ ಕೊಡಲಾಗಿದೆ.

ಶರಾವತಿ ನೀರು ತರಲು ಕಾಂಗ್ರೆಸ್‌ನಲ್ಲೆ ವಿರೋಧ
ಬೆಂಗಳೂರು : ಶರಾವತಿ ನದಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಕ್ಕೆ ಕಾಂಗ್ರೆಸ್‌ನಲ್ಲೆ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌ ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ದೂರು ನೀಡಿರುವ ಅವರು, ಈ ಯೋಜನೆ ಕಾರ್ಯಸಾಧುವಲ್ಲ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ