ಬೆಂಗಳೂರು : ಇಡಿ ಬಲೆಯಲ್ಲಿ ಸಿಲುಕಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ದ್ವೇಷ ರಾಜಕಾರಣಕ್ಕಾಗಿ ಕೇಂದ್ರ ಸರಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜಕೀಯ ವಿರೋಧಿಗಳನ್ನು ಮುಗಿಸಲು ಇಂಥ ಕೆಲಸ ಮಾಡಲಾಗುತ್ತಿದೆ ಎಂದು ಕೈನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.
-ಸಿದ್ದರಾಮಯ್ಯ, ಮಾಜಿ ಸಿಎಂ
ಬಿಜೆಪಿಯೇತರ ನಾಯಕರ ಮನೆ ಮೇಲೆ ಮಾತ್ರವೇ ಈ ದಾಳಿಗಳನ್ನು ಏಕೆ ಮಾಡಲಾಗುತ್ತಿದೆ? ಆಪರೇಷನ್ ಕಮಲ ವಿಚಾರವಾಗಿ ಬಿಎಸ್ವೈ ಅವರು ಆಡಿಯೊ ಟೇಪ್ನಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡ ಮೇಲೂ ಆ ಪ್ರಕರಣದ ತನಿಖೆಯೇಕೆ ಆಗಿಲ್ಲ? ರಾಜಕೀಯ ಸನ್ನಿವೇಶಗಳನ್ನು ಮುಂದಿಟ್ಟುಕೊಂಡು ದಾಳಿ ಮಾಡಲಾಗುತ್ತಿದೆ.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ