ಆ್ಯಪ್ನಗರ

ಸಿದ್ದಗಂಗಾ ಮಠಕ್ಕೆ ಸರ್ಕಾರದಿಂದ ಅಕ್ಕಿ, ಗೋಧಿ ಪೂರೈಕೆ ರದ್ದು! ಚರ್ಚೆಗೆ ಗ್ರಾಸವಾದ ಯು.ಟಿ ಖಾದರ್ ಆರೋಪ

ಸಿದ್ದಗಂಗಾ ಮಠ ಸೇರಿದಂತೆ ವಿವಿಧ ಸಂಘಸಂಸ್ಥೆಗಳಿಗೆ ಪೂರೈಕೆಯಾಗುತ್ತಿದ್ದ ಅಕ್ಕಿ, ಗೋಧಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಜಿ ಸಚಿವ ಯು. ಟಿ ಖಾದರ್ ಆರೋಪ ಮಾಡಿದ್ದಾರೆ. ಖಾದರ್ ಆರೋಪ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು ಆಹಾರ ಸಚಿವ ಶಶಿಕಲಾ ಜೊಲ್ಲೆ ಇದನ್ನು ನಿರಾಕರಿಸಿದ್ದಾರೆ.

Vijaya Karnataka Web 4 Feb 2020, 4:42 pm
ಬೆಂಗಳೂರು: ಸಿದ್ದಗಂಗಾ ಮಠಕ್ಕೆ ರಾಜ್ಯ ಸರಕಾರದಿಂದ ಅಕ್ಕಿ ಹಾಗೂ ಗೋಧಿ ಪೂರೈಕೆಯನ್ನು ರದ್ದು ಮಾಡಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಮಾಡಿರುವ ಆರೋಪ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಮೂರು ತಿಂಗಳಿಂದ ಸಿದ್ದಗಂಗಾ ಮಠ ಸೇರಿದಂತೆ ಹಲವಾರು ಸಂಘಸಂಸ್ಥೆಗಳಿಗೆ ಅಕ್ಕಿ ಹಾಗೂ ಗೋಧಿ ಪೂರೈಕೆ ರದ್ದು ಮಾಡಲಾಗಿದೆ ಎಂದು ಖಾದರ್ ಆರೋಪಿಸಿದ್ದರು.
Vijaya Karnataka Web congress leader ut khader press meet on siddaganga mutt temple
ಸಿದ್ದಗಂಗಾ ಮಠಕ್ಕೆ ಸರ್ಕಾರದಿಂದ ಅಕ್ಕಿ, ಗೋಧಿ ಪೂರೈಕೆ ರದ್ದು! ಚರ್ಚೆಗೆ ಗ್ರಾಸವಾದ ಯು.ಟಿ ಖಾದರ್ ಆರೋಪ


ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖಾದರ್, ದಾಸೋಹ ಕಾರ್ಯಕ್ರಮದಡಿ ಸಿದ್ದಗಂಗಾ ಮಠದ ಒಬ್ಬ ವಿದ್ಯಾರ್ಥಿಗೆ ತಲಾ 10 ಕೆಜಿ ಅಕ್ಕಿ, 5 ಕೆಜಿ ಗೋಧಿಯಂತೆ, ಒಟ್ಟು 7359 ವಿದ್ಯಾರ್ಥಿಗಳಿಗೆ 73,590 ಕೆ.ಜಿ ಅಕ್ಕಿ, 36,794 ಕೆ.ಜಿ. ಗೋಧಿಯನ್ನು ಕೊಡಲಾಗುತ್ತಿತ್ತು. ಇದೀಗ ಬಿಜೆಪಿ ಸರ್ಕಾರ ತ್ರಿವಿಧ ದಾಸೋಹ ಮಾಡುತ್ತಿರುವ ಮಠದ ಮಕ್ಕಳ ಅನ್ನವನ್ನೇ ಕಸಿದುಕೊಳ್ಳುತ್ತಿದೆ.

ಅನಾಥಾಶ್ರಮ, ವೃದ್ಧಾಶ್ರಮ, ಪುನರ್ವಸತಿ ಕೇಂದ್ರಗಳು ಸೇರಿದಂತೆ 454 ಸರ್ಕಾರೇತರ ಸಂಸ್ಥೆಗಳಿಗೆ ಹಿಂದಿನ ಸರ್ಕಾರಗಳು ನೀಡುತ್ತಿದ್ದ, ದಾಸೋಹ ಕಾರ್ಯಕ್ರಮವನ್ನು ಬಿಎಸ್‌ವೈ ಸರಕಾರ 3 ತಿಂಗಳಿಂದ ನಿಲ್ಲಿಸಿರುವುದು ಅಮಾನವೀಯ ತೀರ್ಮಾನ. ಬಡವರಿಗೆ ಅನ್ನ ನೀಡುವ ಕಾರ್ಯಕ್ರಮ ಮುಂದುವರೆಸದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

‘ಬಜೆಟ್‌ ರೈತರು, ಯುವಕರಿಗೆ ಆಶಾದಾಯಕವಾಗಿಲ್ಲ’ ಸಿದ್ದರಾಮಯ್ಯ ಟೀಕೆ

ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಆಹಾರ ಸಚಿವೆ ಶಶಿಕಲಾ ಜೊಲ್ಲೆ, ಯು.ಟಿ ಖಾದರ್ ಆರೋಪವನ್ನು ನಿರಾಕರಿಸಿದ್ದಾರೆ. ಸರಕಾರ 464 ಸಂಸ್ಥೆಗಳಿಗೆ ಅಕ್ಕಿ, ಗೋದಿ ಪೂರೈಕೆ ಮಾಡುತ್ತಿವೆ, ಬಿಜೆಪಿ ಸರ್ಕಾರದ ಬಂದ ಬಳಿಕ ಅಕ್ಕಿ, ಗೋದಿ ಪೂರೈಕೆ ನಿಂತಿವೆ ಎಂಬ ಆರೋಪ ಸುಳ್ಳು. ಅಕ್ಕಿ, ಗೋಧಿ ಪೂರೈಕೆಯನ್ನು ಬಿಜೆಪಿ ಸರಕಾರ ಬಂದ ಬಳಿಕ ಸ್ಥಗಿತಗೊಳಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲೇ ಅಕ್ಕಿ, ಗೋಧಿ ಪೂರೈಕೆ ನಿಲ್ಲಿಸಲಾಗಿತ್ತು.

ವಾರ್ಷಿಕವಾಗಿ ಅಕ್ಕಿ, ಗೋಧಿ ಪೂರೈಕೆಗೆ 12.50 ಕೋಟಿ ರೂಪಾಯಿ ವೆಚ್ಚ ತಗುಲುತ್ತದೆ. ವಿವಿಧ ಮಠಗಳು, ಮತ್ತು ಸಂಘ ಸಂಸ್ಥೆಗಳು ಮನವಿ ಮೇರೆಗೆ ಅಕ್ಕಿ ಗೋಧಿ ಕೊಡಲು ಮುಂದಾಗುತ್ತೇವೆ. ಸಿಎಂ ಜೊತೆ ಚರ್ಚೆ ನಡೆಸಿ ಆಹಾರ ಧಾನ್ಯಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಮಠಗಳು, ಸಂಘ ಸಂಸ್ಥೆಗಳಿಗೆ ಅನ್ಯಾಯ ಆಗದಂತೆ ನೋಡಿಕೊಳ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ