ಬೆಂಗಳೂರು: ನಾವು ಪಾಕಿಸ್ತಾನಕ್ಕೆ ಬಿರಿಯಾನಿ ತಿನ್ನಲು, ಜರತಾರಿ ಸೀರೆಯನ್ನು ಕೊಡಲು ಹೋಗಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಪ್ರಕರಣವನ್ನುಖಂಡಿಸಿದ ಅವರು ಬಿಜೆಪಿ ವಿರುದ್ಧನೂ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ದೇಶದ ಬಗ್ಗೆ ನಮ್ಮ ಹೆಮ್ಮೆ ಇರಬೇಕು. ಯಾವುದೇ ವ್ಯಕ್ತಿ ನಮ್ಮ ವೈರಿ ರಾಷ್ಟ್ರದ ಬಗ್ಗೆ ಜೈಕಾರ ಹಾಕಬಾರದು. ಒಬ್ಬ ಹೆಣ್ಣುಮಗಳು ಪಾಕಿಸ್ತಾನ ಪರ ಜಿಂದಾಬಾದ್ ಹಾಕಿರುವುದು ಅಕ್ಷಮ್ಯ ಅಪರಾಧ. ಯಾವುದೇ ಭಾರತೀಯರು ಇದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿರು.
ಓವೈಸಿ ಸದೆಬಡಿಯಲು ನಮಗೆ ಐದು ನಿಮಿಷ ಸಾಕು! ಸೋಮಶೇಖರ ರೆಡ್ಡಿ ಕಿಡಿ
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಯುವತಿಯನ್ನು ಪೋಲೀಸರು ತಕ್ಷಣ ದಸ್ತಗಿರಿ ಮಾಡಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡೆದಿರುವುದು ಸ್ವಾಗತಾರ್ಹ. ಈ ರೀತಿಯ ವ್ಯಕ್ತಿಯನ್ನು ಅಂಡಮಾನ್ ಜೈಲಿನಲ್ಲಿ ಇಡುವುದು ಸೂಕ್ತ. ಆಕೆಯ ವಿರುದ್ಧ ಜೀವನ ಪರ್ಯಂತ ಜೈಲಿನಲ್ಲಿ ಉಳಿಯುವಂತೆ ಕ್ರಮ ಕೈಗೊಳ್ಳಬಹುದು ಎಂದು ಆಗ್ರಹಿಸಿದರು.
'ಪಾಕಿಸ್ತಾನ್ ಜಿಂದಾಬಾದ್' ಎನ್ನುವ ಮುನ್ನ ಈ ಅಂಶಗಳು ಗಮನದಲ್ಲಿರಲಿ..!
ಇದೇ ವೇಳೆ ಕಾಶ್ಮೀರದ ವಿಚಾರವಾಗಿಯೂ ಮಾತನಾಡಿದ ಅವರು, ಕಾಂಗ್ರೆಸ್ ಯಾವತ್ತೂ ಕಾಶ್ಮೀರ ಪ್ರತ್ಯೇಕತೆಗೆ ಬೆಂಬಲವನ್ನು ಸೂಚಿಸಿಲ್ಲ. ಫ್ರೀ ಕಾಶ್ಮೀರ ಎಂದರೆ ಅಲ್ಲಿ ತಡೆ ಹಿಡಿದಿರುವ ಇಂಟರ್ ನೆಟ್ ಹಾಗೂ ಬೇರೆ ಸೌಲಭ್ಯಗಳನ್ನು ನೀಡುವಂತೆ ಒತ್ತಾಯ ಮಾಡುವುದಾಗಿದೆ.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು ನಾವು ಸ್ಟಂಟ್ ಮಾಡಲು ಕಾಶ್ಮೀರ ಪರವಾಗಿಲ್ಲ. ಬಿಜೆಪಿಯವರು ಈಗಲೂ ತಮ್ಮ ಕಚೇರಿಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವುದಿಲ್ಲ. ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಯಾವತ್ತು ಆಟ ಆಡುವುದಿಲ್ಲ ಎಂದ ಅವರು ನಾವು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿಲ್ಲ, ಜರತಾರಿ ಸೀರೆ ಕೊಡಲು ಹೋಗಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.
ಬುಧವಾರ ಸದನದಲ್ಲಿ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಮೋದಿಯವರು ಹೋಗಿದ್ದಾರೆ ಎಂಬ ಹೇಳಿಕೆ ಭಾರೀ ಸದ್ದು ಮಾಡಿತ್ತು. ಆಡಳಿತ ಪಕ್ಷದ ಸದಸ್ಯರ ವಿರೋಧದ ಹಿನ್ನೆಲೆಯಲ್ಲಿ ಖಾದರ್ ಕ್ಷಮೆಯಾಚನೆ ಮಾಡಿದ್ದರು.
ನಮ್ಮ ದೇಶದ ಬಗ್ಗೆ ನಮ್ಮ ಹೆಮ್ಮೆ ಇರಬೇಕು. ಯಾವುದೇ ವ್ಯಕ್ತಿ ನಮ್ಮ ವೈರಿ ರಾಷ್ಟ್ರದ ಬಗ್ಗೆ ಜೈಕಾರ ಹಾಕಬಾರದು. ಒಬ್ಬ ಹೆಣ್ಣುಮಗಳು ಪಾಕಿಸ್ತಾನ ಪರ ಜಿಂದಾಬಾದ್ ಹಾಕಿರುವುದು ಅಕ್ಷಮ್ಯ ಅಪರಾಧ. ಯಾವುದೇ ಭಾರತೀಯರು ಇದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿರು.
ಓವೈಸಿ ಸದೆಬಡಿಯಲು ನಮಗೆ ಐದು ನಿಮಿಷ ಸಾಕು! ಸೋಮಶೇಖರ ರೆಡ್ಡಿ ಕಿಡಿ
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಯುವತಿಯನ್ನು ಪೋಲೀಸರು ತಕ್ಷಣ ದಸ್ತಗಿರಿ ಮಾಡಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡೆದಿರುವುದು ಸ್ವಾಗತಾರ್ಹ. ಈ ರೀತಿಯ ವ್ಯಕ್ತಿಯನ್ನು ಅಂಡಮಾನ್ ಜೈಲಿನಲ್ಲಿ ಇಡುವುದು ಸೂಕ್ತ. ಆಕೆಯ ವಿರುದ್ಧ ಜೀವನ ಪರ್ಯಂತ ಜೈಲಿನಲ್ಲಿ ಉಳಿಯುವಂತೆ ಕ್ರಮ ಕೈಗೊಳ್ಳಬಹುದು ಎಂದು ಆಗ್ರಹಿಸಿದರು.
'ಪಾಕಿಸ್ತಾನ್ ಜಿಂದಾಬಾದ್' ಎನ್ನುವ ಮುನ್ನ ಈ ಅಂಶಗಳು ಗಮನದಲ್ಲಿರಲಿ..!
ಇದೇ ವೇಳೆ ಕಾಶ್ಮೀರದ ವಿಚಾರವಾಗಿಯೂ ಮಾತನಾಡಿದ ಅವರು, ಕಾಂಗ್ರೆಸ್ ಯಾವತ್ತೂ ಕಾಶ್ಮೀರ ಪ್ರತ್ಯೇಕತೆಗೆ ಬೆಂಬಲವನ್ನು ಸೂಚಿಸಿಲ್ಲ. ಫ್ರೀ ಕಾಶ್ಮೀರ ಎಂದರೆ ಅಲ್ಲಿ ತಡೆ ಹಿಡಿದಿರುವ ಇಂಟರ್ ನೆಟ್ ಹಾಗೂ ಬೇರೆ ಸೌಲಭ್ಯಗಳನ್ನು ನೀಡುವಂತೆ ಒತ್ತಾಯ ಮಾಡುವುದಾಗಿದೆ.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು ನಾವು ಸ್ಟಂಟ್ ಮಾಡಲು ಕಾಶ್ಮೀರ ಪರವಾಗಿಲ್ಲ. ಬಿಜೆಪಿಯವರು ಈಗಲೂ ತಮ್ಮ ಕಚೇರಿಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವುದಿಲ್ಲ. ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಯಾವತ್ತು ಆಟ ಆಡುವುದಿಲ್ಲ ಎಂದ ಅವರು ನಾವು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿಲ್ಲ, ಜರತಾರಿ ಸೀರೆ ಕೊಡಲು ಹೋಗಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.
ಬುಧವಾರ ಸದನದಲ್ಲಿ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಮೋದಿಯವರು ಹೋಗಿದ್ದಾರೆ ಎಂಬ ಹೇಳಿಕೆ ಭಾರೀ ಸದ್ದು ಮಾಡಿತ್ತು. ಆಡಳಿತ ಪಕ್ಷದ ಸದಸ್ಯರ ವಿರೋಧದ ಹಿನ್ನೆಲೆಯಲ್ಲಿ ಖಾದರ್ ಕ್ಷಮೆಯಾಚನೆ ಮಾಡಿದ್ದರು.