ಆ್ಯಪ್ನಗರ

ಆನಂದ್‌ ಸಿಂಗ್ ಮೇಲೆ ಹಲ್ಲೆ ಮಾಡಿದ ಶಾಸಕ ಗಣೇಶ್‌ ಮೇಲೆ ಸಿದ್ದರಾಮಯ್ಯ, ಕೆಸಿವಿ, ಪರಂ ಗರಂ

ಹೆಲಿಕಾಪ್ಟರ್ ಮೂಲಕ ರೆಸಾರ್ಟ್‌ಗೆ ಆಗಮಿಸಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಫುಲ್‌ ಗರಂ ಆಗಿದ್ದಾರೆ.

Vijaya Karnataka Web 20 Jan 2019, 7:24 pm
ಬೆಂಗಳೂರು: ಬಿಡದಿ ಬಳಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಶಾಸಕರು ನಡೆಸಿದ ಮಾರಾಮಾರಿಯ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಗರಂ ಆಗಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ವಿಜಯ ನಗರ ಶಾಸಕ ಆನಂದ್‌ ಸಿಂಗ್‌, ಕಂಪ್ಲಿ ಶಾಸಕ ಗಣೇಶ್‌, ಭೀಮಾ ನಾಯಕ್ ಮದ್ಯಪಾನ ಮಾಡಿದ ಸಂದರ್ಭದಲ್ಲಿ ವಾಗ್ದಾದ ನಡೆಸಿ ಕೈ ಕೈ ಮಿಲಾಯಿಸಿದ್ದರು.

ಈ ಸಂದರ್ಭದಲ್ಲಿ ಆನಂದ್‌ ಸಿಂಗ್‌ ಮೇಲೆ ಗಣೇಶ್‌ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡಿರುವ ಆನಂದ್‌ಸಿಂಗ್ ಅವರನ್ನು ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಎಲ್ಲ ಬೆಳವಣಿಗೆಯ ನಡುವೆ ಕೊಪ್ಪಳದಿಂದ ಹೆಲಿಕಾಪ್ಟರ್ ಮೂಲಕ ರೆಸಾರ್ಟ್‌ಗೆ ಆಗಮಿಸಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಫುಲ್‌ ಗರಂ ಆಗಿದ್ದಾರೆ.

ಯಾವನು ಅವನು ಗಣೇಟ್‌, ಅವನಿಗೆ ಬುದ್ದಿ ಇದೆಯೇ, ಶಾಸಕನಾಗಿ ಈ ರೀತಿ ಮಾಡುತ್ತಾನಾ, ಅವನಿಗೆ ಹೇಗೆ ವರ್ತಿಸಬೇಕೆಂದು ಗೊತ್ತಾಗಲ್ವಾ ಎಂದು ಸಿದ್ದರಾಮಯ್ಯ ಏಕವಚನದಲ್ಲಿಯೇ ಗದರಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಕೆ.ಸಿ. ವೇಣುಗೋಪಾಲ್‌, ಜಿ. ಪರಮೇಶ್ವರ್‌ ಕೂಡ ಗರಂ ಆಗಿದ್ದಾರೆ.

ಡಿಕೆ ಶಿವಕುಮಾರ್‌ ಜತೆ ಮಾತನಾಡಿದ ವೇಣುಗೋಪಾಲ್‌, ನೀವಿದ್ದು ಹೀಗೇಕೆ ಆಯಿತು ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ