ಆ್ಯಪ್ನಗರ

ಫೆಬ್ರವರಿ ವೇಳೆಗೆ ಕಾಂಗ್ರೆಸ್‌ ಪ್ರಣಾಳಿಕೆ: ಪ್ರೊ.ರಾಜೀವ್‌ಗೌಡ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಫೆಬ್ರವರಿ ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಎಐಸಿಸಿ ಪ್ರಣಾಳಿಕೆ ಸಮಿತಿ ಸಂಚಾಲಕ ಹಾಗೂ ರಾಜ್ಯಸಭಾ ...

Vijaya Karnataka 11 Nov 2018, 5:00 am
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಫೆಬ್ರವರಿ ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಎಐಸಿಸಿ ಪ್ರಣಾಳಿಕೆ ಸಮಿತಿ ಸಂಚಾಲಕ ಹಾಗೂ ರಾಜ್ಯಸಭಾ ಸದಸ್ಯ ಪ್ರೊ.ರಾಜೀವ್‌ಗೌಡ ತಿಳಿಸಿದ್ದಾರೆ.
Vijaya Karnataka Web rajeeva gowda


''ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಬೇಕಾದ ವಿಚಾರಗಳ ಕುರಿತಂತೆ ಸಾರ್ವಜನಿಕರು ಮತ್ತು ನಾನಾ ಕ್ಷೇತ್ರಗಳ ಪ್ರಮುಖರ ಅಭಿಪ್ರಾಯ ಪಡೆಯಲಾಗುತ್ತಿದ್ದು, ಈಗಾಗಲೇ ದೇಶಾದ್ಯಂತ 44 ಸಭೆಗಳನ್ನು ನಡೆಸಲಾಗಿದೆ. ಬೆಂಗಳೂರು ನಗರದಲ್ಲೂ ಮುಂದಿನ ವಾರ ಸಭೆಗಳನ್ನು ನಡೆಸಲಾಗುವುದು. ಪಕ್ಷದ 'ಜನಧ್ವನಿ' ಕಾರ್ಯಕ್ರಮದ ಮೂಲಕವೂ ಜನಾಭಿಪ್ರಾಯ ಕ್ರೋಢೀಕರಿಸಲಾಗುತ್ತಿದೆ'' ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

''ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅಧ್ಯಕ್ಷತೆಯ ಈ ಸಮಿತಿಯು ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಬೇಕಾದ ವಿಷಯಗಳ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಪಡೆಯುವ ಜತೆಗೆ, ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಲಹೆ, ಅಭಿಪ್ರಾಯಗಳನ್ನೂ ಪಡೆಯುತ್ತಿದೆ. ಫೆಬ್ರವರಿ ಅಂತ್ಯದೊಳಗೆ ಪ್ರಣಾಳಿಕೆ ಸಿದ್ಧಪಡಿಸುವ ಗುರಿಯೊಂದಿಗೆ ಸಮಿತಿ ಕೆಲಸ ಮಾಡುತ್ತಿದೆ'' ಎಂದು ಹೇಳಿದರು.

''ಬಿಜೆಪಿ ವಿರುದ್ಧ ಪರ್ಯಾಯ ಶಕ್ತಿಗಳನ್ನು ಒಗ್ಗೂಡಿಸುವ ಮಹಾಘಟಬಂಧನ್‌ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ಮಹಾಮೈತ್ರಿ ಸಾಧ್ಯವಾದರೆ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ಪಡೆಯಲಾಗುವುದು'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ