ಆ್ಯಪ್ನಗರ

ದಿಲ್ಲಿ ಸಭೆಗೆ ತೆರಳಲಿರುವ ರಾಜ್ಯ ಕಾಂಗ್ರೆಸ್‌ ಪ್ರಮುಖರು

ಪಕ್ಷದ ಸಂಘಟನೆ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸೆಪ್ಟೆಂಬರ್‌ 12ರಂದು ನಡೆಯುವ ಸಭೆಯಲ್ಲಿ ಭಾಗಿಯಾಗಲು ರಾಜ್ಯ ಕಾಂಗ್ರೆಸ್‌ ...

Vijaya Karnataka 11 Sep 2019, 5:00 am
ಬೆಂಗಳೂರು: ಪಕ್ಷದ ಸಂಘಟನೆ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸೆಪ್ಟೆಂಬರ್‌ 12ರಂದು ನಡೆಯುವ ಸಭೆಯಲ್ಲಿ ಭಾಗಿಯಾಗಲು ರಾಜ್ಯ ಕಾಂಗ್ರೆಸ್‌ ಪ್ರಮುಖರು ದಿಲ್ಲಿಗೆ ತೆರಳಲಿದ್ದಾರೆ.
Vijaya Karnataka Web congress-flag


ಸೋನಿಯಾ ಗಾಂಧಿ ಪಕ್ಷದ ನಾಯಕತ್ವ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ನಾನಾ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬುಧವಾರ ರಾತ್ರಿಯೇ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಸೋನಿಯಾ ನೇತೃತ್ವದ ಸಭೆ ನಡೆಯಲಿದೆ. ಪಕ್ಷದ ಸದಸ್ಯತ್ವ ಅಭಿಯಾನ, ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನಾಚರಣೆ ಸಿದ್ಧತೆ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.

ಪ್ರತಿಪಕ್ಷದ ನಾಯಕನ ಆಯ್ಕೆ

ಈ ನಡುವೆ ರಾಜ್ಯದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ಬಾಕಿಯಿರುವುದರಿಂದ ರಾಜ್ಯ ಕಾಂಗ್ರೆಸ್‌ನ ಇನ್ನೂ ಕೆಲವು ಮುಖಂಡರು ದಿಲ್ಲಿಗೆ ತೆರಳುವ ಸಾಧ್ಯತೆಯಿದೆ. ಎಐಸಿಸಿ ಸಭೆಯ ನೇಪಥ್ಯದಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಸೇರಿದಂತೆ ಮಾಜಿ ಡಿಸಿಎಂ ಜಿ.ಪರಮೇಶ್ವರ, ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ನಡುವೆ ಈ ಹುದ್ದೆಗಾಗಿ ಪೈಪೋಟಿ ಏರ್ಪಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ