ಆ್ಯಪ್ನಗರ

ಸೋಲುಗಳು ಪಾಠವಾಗಬೇಕು, ಅಭ್ಯಾಸವಾಗಬಾರದು! ಸ್ವಪಕ್ಷದ ಬಗ್ಗೆ ಎನ್‌ಎ ಹ್ಯಾರಿಸ್‌ ಅಸಮಧಾನ

ಕಾಂಗ್ರೆಸ್ ಪಕ್ಷಕ್ಕೆ ಸೋಲುಗಳು ಪಾಠವಾಗಬೇಕೇ ಹೊರತು ಅಭ್ಯಾಸವಾಗಬಾರದು ಎಂದು ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್‌.ಎ ಹ್ಯಾರಿಸ್ ಟ್ವೀಟ್‌ ಮಾಡಿದ್ದಾರೆ. ಕೈ ಪಾಳಯದಲ್ಲಿ ಆಂತರಿಕ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿರುವ ಈ ಸಂದರ್ಭದಲ್ಲಿ ಹ್ಯಾರಿಸ್‌ ಟ್ವೀಟ್ ಮಹತ್ವ ಪಡೆದುಕೊಂಡಿದೆ.

Vijaya Karnataka Web 14 Feb 2020, 5:02 pm
ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಚರ್ಚೆಗಗಳು ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್‌ ಪಕ್ಷದ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Vijaya Karnataka Web congress mla na haris tweet on his party election defeat
ಸೋಲುಗಳು ಪಾಠವಾಗಬೇಕು, ಅಭ್ಯಾಸವಾಗಬಾರದು! ಸ್ವಪಕ್ಷದ ಬಗ್ಗೆ ಎನ್‌ಎ ಹ್ಯಾರಿಸ್‌ ಅಸಮಧಾನ


ಈ ವಿಚಾರವಾಗಿ ಟ್ವೀಟ್‌ ಮಾಡಿದ ಎನ್‌.ಎ ಹ್ಯಾರಿಸ್‌, ಸೋಲುಗಳು ಪಾಠವಾಗಬೇಕೇ ಹೊರತು ಅಭ್ಯಾಸವಾಗಬಾರದು ಎಂದಿದ್ದಾರೆ. “ ದೆಹಲಿಯಂತಹ ಫಲಿತಾಂಶ ಹಲವಾರು ಬಾರಿ ಬಂದಿದೆ ಆದರೂ ಈ ಬಗ್ಗೆ ಪಕ್ಷ ಯೋಚನೆ ಮಾಡದೇ ಇರುವುದು, ತನ್ನ ತಪ್ಪುಗಳನ್ನು ತಿದ್ದಿಕೊಳ್ಳದೆ ಇರುವುದು ಯೋಚಿಸಬೇಕಾದ ವಿಚಾರ. ದೇಶಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಇದೆ ಆದರೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಚಿಂತಿಸುತ್ತಿಲ್ಲ” ಎಂದು ಪಕ್ಷದ ವಿರುದ್ಧವೇ ಅಸಮಧಾನ ವ್ಯಕ್ತಪಡಿಸಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಆಯ್ಕೆ ಕಗ್ಗಂಟು: ಡಿಕೆಶಿಯಿಂದ ಟೆಂಪಲ್ ರನ್, ಎಂಬಿಪಿಯಿಂದ ಮಾರ್ಮಿಕ ಟ್ವೀಟ್!

ಸೋಲುಗಳು ಪಾಠವಾಗಬೇಕು ಅಭ್ಯಾಸವಾಗಬಾರದು ಎಂದಿರುವ ಅವರು, ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ ಆದರೆ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ ಎಂದಿರುವ ಹ್ಯಾರಿಸ್‌, ಪಕ್ಷದಲ್ಲಿ ಪದಾಧಿಕಾರಿಗಳು ಇರುವುದು ಯಾವ ಕೆಲಸಕ್ಕಾಗಿ ಪಕ್ಷವನ್ನು ಕಟ್ಟುವುದಕ್ಕಾಗಿಯೊ? ಅಥವಾ ತಮ್ಮ ಸ್ವ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಬಲಿ ಕೊಡುವುದಕ್ಕಾಗಿಯೊ? ಎಂದು ಪ್ರಶ್ನಿಸಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಎನ್‌.ಎ ಹ್ಯಾರಿಸ್‌ ಟ್ವೀಟ್‌ ಕುತೂಹಲ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರವಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸರ್ಕಸ್: ಮತ್ತೆ ಎಂ.ಬಿ ಪಾಟೀಲ್‌ ಹೆಸರು ಮುನ್ನಲೆಗೆ

ಡಿಕೆಶಿಗೆ ಅಧ್ಯಕ್ಷ ಸ್ಥಾನ ನೀಡಲು ಸಿದ್ದರಾಮಯ್ಯ ಬಣ ವಿರೋಧ ವ್ಯಕ್ತಪಡಿಸಿದೆ. ಪರಿಣಾಮ ಕಾಂಗ್ರೆಸ್‌ಗೆ ನೂತನ ಸಾರಥಿ ಆಯ್ಕೆ ವಿಚಾರ ಕಗ್ಗಂಟಾಗಿ ಉಳಿದಿದೆ. ಈ ಜಂಜಾಟದಲ್ಲಿ ಮುಳುಗಿರುವ ಕಾಂಗ್ರೆಸ್ ರಾಜ್ಯದಲ್ಲಿ ವಿರೋಧ ಪಕ್ಷವಾಗಿಯೂ ಬಿಎಸ್‌ವೈ ಸರಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸಲಿಲ್ಲ.

ಸರ್ಕಾರದ ಹಲವು ತಪ್ಪು ಹೆಜ್ಜೆಗಳನ್ನು ವಿರೋಧ ಪಕ್ಷದವಾಗಿ ಕಾಂಗ್ರೆಸ್ ವಿರೋಧಿಸಿಲ್ಲ ಎಂಬ ಅಭಿಪ್ರಾಯಗಳು ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಅಲ್ಲದೆ ಪಕ್ಷದ ಮುಖಂಡರ ನಡುವಿನ ಭಿನ್ನಮತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ಮೂಡಿಸಿದೆ. ಈ ನಿಟ್ಟಿನಲ್ಲಿ ಶಾಸಕ ಎನ್‌.ಎ ಹ್ಯಾರಿಸ್‌ ಟ್ವೀಟ್‌ ಮಹತ್ವ ಪಡೆದುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ