ಆ್ಯಪ್ನಗರ

ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ: ಡಿ ಕೆ ಸುರೇಶ್ ವಾಗ್ದಾಳಿ

ಸ್ವಾಮಂತ್ರ್ಯ ಹೋರಾಟಗಾರರು ಹಾಗೂ ಪ್ರಗತಿಪರರ ವಿರುದ್ಧ ಮಾತನಾಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

Vijaya Karnataka Web 2 Feb 2020, 2:07 pm
ಬೆಂಗಳೂರು:ಸಂಸದ ಅನಂತ್ ಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥರಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದು ಉತ್ತಮ ಎಂದು ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web congress mp dk suresh reaction on anantkumar hegde
ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ: ಡಿ ಕೆ ಸುರೇಶ್ ವಾಗ್ದಾಳಿ


ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಗತಿಪರರು ಷಂಡರು ಎಂದು ಅನಂತಕುಮಾರ್ ಹೆಗಡೆ ಅವರು ನೀಡಿದ ಹೇಳಿಕೆಗೆ ಬೆಂಗಳೂರಿನಲ್ಲಿ ಭಾನುವಾರ ತಿರುಗೇಟು ನೀಡಿದರು.

'ಅನಂತ್ ಕುಮಾರ್ ಹೆಗಡೆ ಯಾರಿಗೂ ಬೇಡವಾದ ವಸ್ತು. ಬಿಜೆಪಿಯವರಿಗೂ ಬೇಡವಾಗಿದ್ದಾರೆ. ಅವರನ್ನು ಬೆಂಗಳೂರಿನ ಫೇಮಸ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚೆಕ್ ಮಾಡಿಸುವುದು ಒಳಿತು.

'ಬ್ರಿಟಿಷರೊಂದಿಗೆ ಒಳಒಪ್ಪಂದ ಮಾಡಿದವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಬಿಂಬಿಸಲಾಯಿತು'- ಅನಂತ್ ಕುಮಾರ್ ಹೆಗಡೆ

ಸ್ವಾತಂತ್ರ್ಯ ಹೋರಾಟಗಾರರು ಇರದೇ ಹೋಗಿದ್ದರೆ ಹೆಗಡೆಗೂ ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ. ಬ್ರಿಟಿಷರ ಆಳ್ವಿಕೆ ಅಥವಾ ಹಿಟ್ಲರ್ ಮಾದರಿ ಆಡಳಿತ ಇದ್ದಿದ್ದರೆ, ಹೆಗಡೆಗೂ ಮಾತನಾಡುವ ವಾಕ್ ಸ್ವಾತಂತ್ರ್ಯ ಇರುತ್ತಿರಲಿಲ್ಲ. ಅವರು ಇಷ್ಟೊಂದು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಅಂದ್ರೆ ಸ್ವಾತಂತ್ರ್ಯ ಹೋರಾಟಗಾರರೇ ಕಾರಣ.

ಹೆಗಡೆ ಅವರನ್ನ ಅವರೇ ಗುರುತಿಸಿಕೊಳ್ಳಬೇಕಿದೆ. ಬಿಜೆಪಿಯವರು ಮತ್ತೆ ಅವರನ್ನು ಕೈ ಹಿಡಿತಾರೇನೋ, ಲೈಮ್ ಲೈಟ್ ಗೆ ಬರಬೇಕು, ಅಧಿಕಾರ ಕೊಡುತ್ತಾರೆ ಅಂತ ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರಿಗೆ ನೈತಿಕತೆ ಇದ್ದರೆ ಅನಂತಕುಮಾರ್ ಹೆಗಡೆಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ