ಆ್ಯಪ್ನಗರ

ಕಾಂಗ್ರೆಸ್‌ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವಿನ ಮಾತಿನ ಜಿದ್ದಾಜಿದ್ದಿ ಮುಂದುವರೆದಿದೆ. ಉಪ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಇಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌‌ ಮೈತ್ರಿಗೆ ಯೋಗ್ಯ ಪಕ್ಷವಲ್ಲ ಎಂದು ಕಿಡಿಕಾರಿದ್ದಾರೆ.

Vijaya Karnataka Web 1 Oct 2020, 4:09 pm
ಬೆಂಗಳೂರು: ಉಪ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಇಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌‌ ಮೈತ್ರಿಗೆ ಯೋಗ್ಯ ಪಕ್ಷವಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ ಕಾಂಗ್ರೆಸ್ ಮುಂದೆ‌ ಮೈತ್ರಿ ಪ್ರಸ್ತಾಪವನ್ನು ಜೆಡಿಎಸ್‌ನಿಂದ ಯಾರಿಟ್ಟಿದ್ದಾರೆ ಎಂದು ಕೈ ನಾಯಕರಿಗೆ ಎಚ್‌ಡಿಕೆ ಪ್ರಶ್ನಿಸಿದ್ದಾರೆ.
Vijaya Karnataka Web congress party is not a good ally says former cm hd kumaraswamy
ಕಾಂಗ್ರೆಸ್‌ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ


ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ನಾಯಕರು ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಟಾಂಗ್‌ ನೀಡಿದ್ದಾರೆ.


ಇನ್ನು, ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕಾಂಗ್ರೆಸ್‌ ಕೆಡವಿದೆ. ರಾಜಸ್ಥಾನದಲ್ಲಿ ತಮಗೆ ಬೆಂಬಲ ನೀಡಿದ್ದ ಬಿಎಸ್‌ಪಿ ಶಾಸಕರನ್ನು ಸೆಳೆದಿದೆ. ಮಹಾರಾಷ್ಟ್ರದಲ್ಲಿ ದಿನವೂ ಠಾಕ್ರೆ ಸರಕಾರವನ್ನು ಅಲುಗಾಡಿಸುತ್ತಿರುವ ಕಾಂಗ್ರೆಸ್‌ ಪಕ್ಷದ ವರ್ತನೆಯಿಂದ ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ ಎಂದಿದ್ದಾರೆ.


ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದಿರುವ ಮಾಜಿ ಸಿಎಂ, ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಮಾಡಿಕೊಳ್ಳಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‌ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್ - ಜೆಡಿಎಸ್ ಎಂಬ ಭಾವನೆಯೂ ಬೇಡ ಎಂದು ಹೇಳಿದ್ದಾರೆ.

2018ರಲ್ಲಿ ಮೋದಿಯೇ ನನಗೆ ಸಿಎಂ ಆಫರ್ ಕೊಟ್ಟಿದ್ದರು, ಆದರೆ..: ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್‌

ಇನ್ನು, ಜೆಡಿಎಸ್ ಮತ್ತು ದೇವೇಗೌಡರ ಹೆಸರು ಬಳಸಿ ಕಾಂಗ್ರೆಸ್‌ ಪಕ್ಷದ ನಾಯಕರು ಲಾಭ ಮಾಡಿಕೊಳ್ಳುವುದು ಬೇಡ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದರು. ಆ ಹೇಳಿಕೆಗೆ ಈಗ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಶಿರಾ ಚುನಾವಣೆಯಲ್ಲಿ ಗೆಲ್ಲಿಸಿದರೆ ಮಾತ್ರ ರಾಜಕೀಯದಲ್ಲಿ ಮುಂದುವರಿಯುತ್ತೇನೆ - ಎಚ್‌ಡಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ