ಆ್ಯಪ್ನಗರ

ಕೊರೊನಾ ಲಾಕ್‌ಡೌನ್: ಸೋನಿಯಾ ಗಾಂಧಿ ಜೊತೆಗೆ ಡಿಕೆಶಿ ವಿಡಿಯೋ ಸಂವಾದ

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ ಹಾಗೂ ಕಾಂಗ್ರೆಸ್ ಪಕ್ಷ ಇದಕ್ಕೆ ಯಾವ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂಬ ಮಾಹಿತಿಯನ್ನು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ವಿಡಿಯೋ ಸಂವಾದದ ಮೂಲಕ ಪಡೆದುಕೊಂಡರು.

Vijaya Karnataka Web 10 Apr 2020, 4:51 pm
ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಡಿಯೋ ಸಂವಾದ ನಡೆಸಿದರು. ಶುಕ್ರವಾರ ಸೋನಿಯಾ ಗಾಂಧಿಯವರು ವಿವಿಧ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರುಗಳ ಜೊತೆಗೆ ವಿಡಿಯೋ ಸಂವಾದ ನಡೆಸಿ ಸದ್ಯದ ಪರಿಸ್ಥಿತಿಯ ಕುರಿತಾಗಿ ಮಾಹಿತಿ ಪಡೆದುಕೊಂಡರು.
Vijaya Karnataka Web dk shivaumar


ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಪರಿಸ್ಥಿತಿಯ ಕುರಿತಾಗಿ ಸೋನಿಯಾ ಗಾಂಧಿಯವರಿಗೆ ಮಾಹಿತಿ ನೀಡಿದ ಡಿಕೆಶಿ ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಕೆಲಸ ಕಾರ್ಯಗಳ ಕುರಿತಾಗಿ ತಿಳಿಸಿದರು.

ಕರ್ನಾಟಕ ಲಾಕ್‌ಡೌನ್: ಕೆಪಿಸಿಸಿ ಕಚೇರಿಗೆ ಅನಗತ್ಯ ಭೇಟಿ ನಿಷೇಧ

ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಪಕ್ಷದ ವತಿಯಿಂದ ಯಾವ ರೀತಿಯಲ್ಲಿ ಸ್ಪಂದಿಸಲಾಗುತ್ತಿದೆ. ಇದರಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಯಾವ ರೀತಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಿದರು.

ಅಲ್ಲದೆ ವಿರೋಧ ಪಕ್ಷವಾಗಿ ಕೊರೊನಾ ಲಾಕ್‌ಡೌನ್‌ನಿಂದಾಗಿ ಜನಸಾಮಾನ್ಯರ ಸಂಕಷ್ಟಗಳ ಕುರಿತಾಗಿ ಸರ್ಕಾರದ ಗಮನಸೆಳೆಯುವ ಕೆಲಸವನ್ನು ಯಾವ ರೀತಿಯಲ್ಲಿ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನನಗೆ ಈಗ ಬೇಡ: ರಮೇಶ್‌ ಜಾರಕಿಹೊಳಿ ಸ್ಪಷ್ಟನೆ

ಅಲ್ಲದೆ, ಕೊರೊನಾ ಪರಿಸ್ಥಿತಿ ನಂತರದ ದಿನಗಳಲ್ಲಿ ಬಂದೊದಗಲಿರುವ ಆರ್ಥಿಕ ಸವಾಲು ಎದುರಿಸುವ ಮಾರ್ಗೋಪಾಯಗಳನ್ನು ಕಂಡು ಹಿಡಿಯಲು ಮಾಜಿ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ರಚಿಸಲಾಗಿರುವ 'ವಿಷನ್ ಕರ್ನಾಟಕ' ಸಮಿತಿಯ ಕುರಿತಾಗಿಯೂ ಡಿಕೆಶಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದ ಪರಿಸ್ಥಿತಿಯ ಕುರಿತಾಗಿ ಮಾಹಿತಿ ಪಡೆದುಕೊಂಡ ಸೋನಿಯಾ ಗಾಂಧಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ