ಆ್ಯಪ್ನಗರ

ಕೃಷಿ ಮಸೂದೆಗಳಿಗೆ ವಿರೋಧ, ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಮತ್ತೆ ಹೋರಾಟ

ವಿವಾದಾತ್ಮಕ ಕೃಷಿ ಮಸೂದೆಗಳ ಜಾರಿಗೆ ವಿರೋಧಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ವಿರೋಧ ಪಕ್ಷಗಳು ಮುಂದಾಗಿವೆ. ಈ ನಿಟ್ಟಿನಲ್ಲಿ ಅಕ್ಟೋಬರ್ 2 ರಂದು ಮತ್ತೆ ಹೋರಾಟಗಳು ನಡೆಯಲಿವೆ.

Vijaya Karnataka Web 29 Sep 2020, 12:20 pm
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಹೋರಾಟ ನಡೆಯಲಿದೆ. ಅಕ್ಟೋಬರ್ 2 ರಂದು ರಾಷ್ಟ್ರಾದ್ಯಂತ ಪ್ರತಿಭಟನೆಗಳು ನಡೆಯಲಿದ್ದು ಇದರ ಭಾಗವಾಗಿ ರಾಜ್ಯದಲ್ಲೂ ಪ್ರತಿಭಟನೆಗಳು ನಡೆಯಲಿವೆ.
Vijaya Karnataka Web congress protest


ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಕೇಂದ್ರ, ರಾಜ್ಯ‌ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ಅಕ್ಟೋಬರ್ 2 ರಂದು ರಾಷ್ಟ್ರಾದ್ಯಂತ ನಡೆಯುವ ಹೋರಾಟದ ಭಾಗವಾಗಿ ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯಲಿವೆ. ರಾಜ್ಯದ ಎಲ್ಲಾ ಜಿಲ್ಲೆ, ಬೂತ್ ಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್‌ ಹೆಚ್ಚಳ, ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್‌ ಸಭೆ

ಅಷ್ಟೇ ಅಲ್ಲದೆ, ಅಕ್ಟೋಬರ್ 10 ರಿಂದ 30 ರವರೆಗೆ ಈ ಹೋರಾಟದ ಭಾಗವಾಗಿ ಸಹಿ‌ ಸಂಗ್ರಹ ಚಳವಳಿ ಮಾಡಬೇಕು. ಜಾತಿ, ಧರ್ಮ, ವರ್ಗ, ಪಕ್ಷಾತೀತವಾಗಿ ರಾಜ್ಯದ ಪ್ರತಿ‌ ರೈತರಿಂದ ಸಹಿ‌ ಸಂಗ್ರಹಿಸಬೇಕು.ಪ್ರತಿ ಬ್ಲಾಕ್ ನಿಂದ ನಮ್ಮ‌ಕಾರ್ಯಕರ್ತರು‌ ಸಹಿ ಸಂಗ್ರಹಿಸುವ ಕೆಲಸ ಮಾಡಬೇಕು. ಅತಿ ಹೆಚ್ಚು ಸಹಿಗಳನ್ನು ಕರ್ನಾಟಕದಿಂದ ಸಂಗ್ರಹಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದಾರೆ.

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಕರ್ನಾಟಕ ಬಂದ್ ನಡೆದಿತ್ತು. ಬಂದ್ ಬಹುತೇಕ ಯಶಸ್ವಿಯೂ ಆಗಿದೆ. ಇದೀಗ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿಲು ವಿರೋಧ ಪಕ್ಷಗಳು ಹಾಗೂ ರೈತ ಸಂಘಟನೆಗಳು ಮುಂದಾಗಿವೆ. ಇದರ ಭಾಗವಾಗಿ ಅಕ್ಟೋಬರ್‌ 2 ರಂದು ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ