ಆ್ಯಪ್ನಗರ

ಸಮಾನ ಮನಸ್ಕರ ಸಭೆ 7ಕ್ಕೆ ನಿಗದಿ

ಚಿಂಚೋಳಿ ಹಾಗೂ ಕುಂದಗೋಳ ಉಪ ಚುನಾವಣೆಗಳ ನಾಮಪತ್ರ ಸಲ್ಲಿಕೆ ಪ್ರಕಿಯೆ ಹಿನ್ನೆಲೆಯಲ್ಲಿ ಹಠಾತ್‌ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್‌ನ ಸಮಾನ ಮನಸ್ಕ ...

Vijaya Karnataka 2 May 2019, 5:00 am
ಬೆಂಗಳೂರು: ಚಿಂಚೋಳಿ ಹಾಗೂ ಕುಂದಗೋಳ ಉಪ ಚುನಾವಣೆಗಳ ನಾಮಪತ್ರ ಸಲ್ಲಿಕೆ ಪ್ರಕಿಯೆ ಹಿನ್ನೆಲೆಯಲ್ಲಿ ಹಠಾತ್‌ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್‌ನ ಸಮಾನ ಮನಸ್ಕ ಶಾಸಕರ ಸಭೆ ಮಂಗಳವಾರ ನಡೆಯುವ ಸಾಧ್ಯತೆಗಳಿವೆ.
Vijaya Karnataka Web Ajaysing Congress- jewargi


ಜೇವರ್ಗಿ ಶಾಸಕ ಹಾಗೂ ದಿಲ್ಲಿ ವಿಶೇಷ ಪ್ರತಿನಿಧಿ ಡಾ.ಅಜಯ್‌ ಸಿಂಗ್‌ ನಿವಾಸದಲ್ಲಿ ಬುಧವಾರ ಸಂಜೆ ನಡೆದ ಉಪಹಾರ ಕೂಟದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಬಿಡಿಎ ಅಧ್ಯಕ್ಷ ಎಸ್‌.ಟಿ.ಸೋಮಶೇಖರ್‌, ಶಾಸಕರಾದ ಬೈರತಿ ಬಸವರಾಜ ಹಾಗೂ ಮುನಿರತ್ನ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸಮ್ಮಿಶ್ರ ಸರಕಾರದ ಕಾರ್ಯವೈಖರಿ ಹಾಗೂ ಅಧಿಕಾರಿಗಳ ಧೋರಣೆ ಬಗ್ಗೆ ಪದೇಪದೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್‌ ಶಾಸಕರ ನಡೆ ಈಗ ಮತ್ತಷ್ಟು ಕುತೂಹಲ ಕೆರಳಿಸಿದೆ. ಇದು ಸಮ್ಮಿಶ್ರ ಸರಕಾರವನ್ನು ಆತಂಕಕ್ಕೆ ದೂಡಿದೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅಜಯ್‌ ಸಿಂಗ್‌,''ಉಪ ಚುನಾವಣೆಗಳ ಚರ್ಚೆಗೆ ಸೇರಿದ್ದೇವು. ಮುಂದೆ ಸದ್ಯದಲ್ಲೇ ಸಮಾನ ಮನಸ್ಕರ ಸಭೆ ಕರೆಯುತ್ತೇವೆ,'' ಎಂದು ಸ್ಪಷ್ಟಪಡಿಸಿದರು.

ಎಸ್‌.ಟಿ.ಸೋಮಶೇಖರ್‌,''ಬಿಡಿಎ ಅಧ್ಯಕ್ಷನಾದರೂ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಬಿಡಿಎ ಆಯುಕ್ತರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ನೂರಾರು ಕೋಟಿ ರೂ. ವಂಚನೆ ಮಾಡಿದ ಅಧಿಕಾರಿ ವಿರುದ್ಧ ಇದುವರೆಗೂ ಕ್ರಮಕೈಗೊಂಡಿಲ್ಲ. ಇವುಗಳ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಗಮನಕ್ಕೆ ತಂದಿದ್ದೇನೆ,''ಎಂದರು.

ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜು,''ಒಂದು ರೀತಿ ನಾವೆಲ್ಲಾ ವಿವಿಧ ನಿಗಮ, ಮಂಡಳಿಗಳಿಗೆ ಡಮ್ಮಿ ಅಧ್ಯಕ್ಷರಾಗಿದ್ದೇವೆ,'' ಎಂದು ಅಸಮಾಧಾನ ಹೊರಹಾಕಿದರು. ಆದರೆ ಶಾಸಕ ಮುನಿರತ್ನ ಮಾತ್ರ, ''ಈ ಆಟದಲ್ಲಿ ನಾನಿಲ್ಲ, ಕೇವಲ ನನ್ನ ಕ್ಷೇತ್ರಕ್ಕೆ ಅನುದಾನ ತರಬೇಕು, ಅಭಿವೃದ್ಧಿ ಕೆಲಸಕ್ಕೆ ಮಾತ್ರ ಸೀಮಿತ' ಎಂದು ಭಿನ್ನರಾಗ ಎಳೆದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ