ಆ್ಯಪ್ನಗರ

ಸಿಎಂ ಹೇಳಿಕೆಯ ಬೆನ್ನಲ್ಲೇ ಆಕ್ಷನ್, ರಿಯಾಕ್ಷನ್ ಪ್ರಕರಣಗಳು ಹೆಚ್ಚುತ್ತಿವೆ: ಕಾಂಗ್ರೆಸ್ ಆರೋಪ

ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಆದರೆ ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

Vijaya Karnataka Web 20 Oct 2021, 6:07 pm
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡುವ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯ ಬೆನ್ನಲ್ಲೇ ಸಮಾಜದಲ್ಲಿ ಆಕ್ಷನ್ ಮತ್ತು ರಿಯಾಕ್ಷನ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
Vijaya Karnataka Web ಕಾಂಗ್ರೆಸ್
ಕಾಂಗ್ರೆಸ್‌


ರಾಜ್ಯದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣಗಳನ್ನು ಉಲ್ಲೇಖಿಸಿ ಆರೋಪ ಮಾಡಿರುವ ಕಾಂಗ್ರೆಸ್ ಬೆಲೆ ಏರಿಕೆಯಿಂದ ಜನ ಶಾಪ ಹಾಕುತ್ತಿದ್ದರೆ, ಬಿಜೆಪಿ ಮುಂದಿನ ಚುನಾವಣೆಗೆ ಬೇಕಾದ ಹಿಂಸೆಯ ವಾತಾವರಣ ನಿರ್ಮಿಸಲು ದ್ವೇಷದ ಬೀಜ ಬಿತ್ತಿ ನೀರೆರೆಯುತ್ತಿದೆ ಎಂದಿದೆ.

ರಾಜ್ಯದ ಜನತೆ ಈ ಮಾಯಾಬಲೆಯ ಬಗ್ಗೆ ಎಚ್ಚರ ವಹಿಸಬೇಕಿದೆ. ಸಿಎಂ ಬೊಮ್ಮಾಯಿ ಅವರ 'ಆಕ್ಷನ್ - ರಿಯಾಕ್ಷನ್' ಹೇಳಿಕೆ ಬೆನ್ನಲ್ಲೇ ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಗರಿಗೆದರಿದೆ. ಉತ್ತಮ ಆಡಳಿತ ನೀಡಲಾಗದೆ ಭ್ರಷ್ಟಚಾರದಲ್ಲಿ ಮುಳುಗೇಳುತ್ತಿರುವ ಬಿಜೆಪಿ, ಹಿಂಸೆ ಹಾಗೂ ಕೋಮು ದ್ವೇಷವನ್ನೇ ಮೂಲ ಮಂತ್ರವಾಗಿಸಿಕೊಂಡಿದೆ ಎಂದು ಆರೋಪ ಮಾಡಿದೆ.

ರಾಹುಲ್ ಡ್ರಗ್ ಪೆಡ್ಲರ್ ಹೇಳಿಕೆ: ನಳಿನ್ ಕುಮಾರ್ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಮುಖಂಡರು

ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಆದರೆ ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

ಅನೈತಿಕ ಪೊಲೀಸ್ ಗಿರಿ ಆರೋಪಿಗಳ ಪರವಾಗಿ ನಿಂತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದ ಅವರು, ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌ ಎಂದಿದ್ದರು.

‘ಸಂಘ ಸಂಸ್ಕಾರ’ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು?; ಬಿಜೆಪಿ ವಿರುದ್ಧ ಜೆಡಿಎಸ್ ವಾಗ್ಬಾಣ

ಈ ನಡುವೆ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಭಿನ್ನಧರ್ಮೀಯ ಯುವಕ-ಯುವತಿ ಜೊತೆಯಾಗಿ ಕಾಣಿಸಿಕೊಂಡಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಬಲವಂತವಾಗಿ ಯುವತಿಯ ಬುರ್ಖಾವನ್ನು ತೆಗೆಸಿ ನಿಂದಿಸಲಾಗಿದೆ.

ಈ ಪ್ರಕರಣಕ್ಕೆ ಭಾಗಿಯಾದ ದುಷ್ಕರ್ಮಿಗಳ ಬಂಧನ ಆಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಗಂಡ ಹೆಂಡತಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭಿನ್ನಕೋಮಿನ ಪರಿಚಯಸ್ಥ ಮಹಿಳೆಯರಿಬ್ಬರಿಗೆ ಕಾರಿನಲ್ಲಿ ಡ್ರಾಪ್‌ ಕೊಟ್ಟ ಕಾರಣಕ್ಕಾಗಿ ಪ್ರಶ್ನಿಸಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳನ್ನು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್‌ ಠಾಣೆಯಿಂದ ಕರೆದುಕೊಂಡು ಬಂದ ನಡೆಗೆ ವಿರೋಧ ವ್ಯಕ್ತವಾಗಿತ್ತು.

ಈ ನಡುವೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಇದರಲ್ಲಿ ಯಾವುದೇ ರೀತಿಯ ತಾರತಮ್ಯ ನಡೆಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈಗಾಗಲೇ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ