ಆ್ಯಪ್ನಗರ

ಜಾರಕಿಹೊಳಿ ಟೀಮ್‌ ಪ್ರವಾಸ: ವರದಿ ಕೇಳಿದ ಕೆ.ಸಿ.ವೇಣುಗೋಪಾಲ್

ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ 13 ಶಾಸಕರು ರಾಜಸ್ಥಾನ ಪ್ರವಾಸಕ್ಕೆ ತೆರಳಿರುವುದು ಸಮ್ಮಿಶ್ರ ಸರಕಾರದ ಮಿತ್ರಪಕ್ಷಗಳಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರವಾಸದ ಉದ್ದೇಶದ ಬಗ್ಗೆ ತಮಗೆ ವರದಿ ನೀಡುವಂತೆ ಕೆಪಿಸಿಸಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಸೂಚಿಸಿದ್ದಾರೆ.

Vijaya Karnataka 19 Jul 2018, 7:40 am
ಬೆಂಗಳೂರು : ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ 13 ಶಾಸಕರು ರಾಜಸ್ಥಾನ ಪ್ರವಾಸಕ್ಕೆ ತೆರಳಿರುವುದು ಸಮ್ಮಿಶ್ರ ಸರಕಾರದ ಮಿತ್ರಪಕ್ಷಗಳಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರವಾಸದ ಉದ್ದೇಶದ ಬಗ್ಗೆ ತಮಗೆ ವರದಿ ನೀಡುವಂತೆ ಕೆಪಿಸಿಸಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಸೂಚಿಸಿದ್ದಾರೆ.
Vijaya Karnataka Web venugopal


ಅಜ್ಮೀರ್‌ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ ಶಾಸಕರು ಈ ಪ್ರವಾಸ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಾಗಿದ್ದಾರೆ. ರಮೇಶ್‌ ಜಾರಕಿಹೊಳಿ ಸಹೋದರ ಸತೀಶ್‌ ಜಾರಕಿಹೊಳಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯುವ ಸಂಪುಟ ವಿಸ್ತರಣೆ ವೇಳೆ ಸತೀಶ್‌ ಅವರಿಗೆ ಸ್ಥಾನ ನೀಡಲಾಗುತ್ತದೆ. ಇದರಿಂದ ರಮೇಶ್‌ ಅವರಿಗೆ ಹಿನ್ನಡೆಯಾಗಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ಹಾಗಾಗಿ ಪಕ್ಷದ ವರಿಷ್ಠರಿಗೆ ಸಂದೇಶ ರವಾನಿಸಲು ಸಿದ್ದರಾಮಯ್ಯ ಜತೆಗಿರುವ ಶಾಸಕರನ್ನು ರಮೇಶ್‌ ಜಾರಕಿಹೊಳಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ಇಂತಹ ಮಾಹಿತಿ ಹರಿದಾಡುತ್ತಿರುವುದರಿಂದ ವೇಣುಗೋಪಾಲ್‌ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಹೈಕಮಾಂಡ್‌ ಗಮನಕ್ಕೆ ತರದೆ ದಿಢೀರ್‌ ಪ್ರವಾಸ ಕೈಗೊಂಡಿದ್ದೇಕೆಂದು ತಿಳಿದುಕೊಳ್ಳಬೇಕು. ನಂತರ ಈ ಸಂಬಂಧ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ