ಆ್ಯಪ್ನಗರ

ಸಿಎಂ ಗ್ರಾಮ ವಾಸ್ತವ್ಯ ನಿರ್ಧಾರಕ್ಕೆ ತುಟಿಪಿಟಿಕ್‌ ಎನ್ನದ ಕೈನಾಯಕರು

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಸಿಎಂ ಎಚ್‌ಡಿ...

Vijaya Karnataka 6 Jun 2019, 5:00 am
ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ಕಾಂಗ್ರೆಸ್‌ ನಾಯಕರು ಈವರೆಗೂ ತಮ್ಮ ಅಭಿಪ್ರಾಯ ತಿಳಿಸಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಸಹಿತ ಯಾರೂ ಈ ವಿಚಾರದಲ್ಲಿ ತುಟಿಪಿಟಿಕ್‌ ಎಂದಿಲ್ಲ.
Vijaya Karnataka Web congress-flag


ಜೆಡಿಎಸ್‌-ಬಿಜೆಪಿ ನೇತೃತ್ವದ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಶುರು ಮಾಡಿದ್ದರು. ಇದು ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.

ಲೋಕಸಭೆ ಚುನಾವಣೆ ವೈಫಲ್ಯ ಹಾಗೂ ದೋಸ್ತಿ ಸರಕಾರದ ಬಗ್ಗೆ ಜನರಲ್ಲಿರುವ ಅಸಹನೆಯನ್ನು ಮರೆಸುವ ಉದ್ದೇಶದಿಂದ ಸಿಎಂ ಗ್ರಾಮ ವಾಸ್ತವ್ಯಕ್ಕೆ ಮರಳುವ ತೀರ್ಮಾನ ಕೈಗೊಂಡಿದ್ದಾರೆ. 2ನೇ ಕಂತಿನ ಈ ಗ್ರಾಮ ವಾಸ್ತವ್ಯ ಯಶಸ್ವಿಯಾದರೆ ಅದರ ಲಾಭ ಜೆಡಿಎಸ್‌ಗೂ ಸಿಗುತ್ತದೆ. ಮುಖ್ಯವಾಗಿ ಕುಮಾರಸ್ವಾಮಿ ನಾಯಕತ್ವ ಗಟ್ಟಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ ನಾಯಕರ ಮೌನ ಗಮನಿಸಿದರೆ ವಿಚಲಿತರಾದಂತೆ ತೋರುತ್ತಿದೆ.

ಕಾಂಗ್ರೆಸ್‌ ಮೂಲಗಳ ಪ್ರಕಾರ, ಕುಮಾರಸ್ವಾಮಿ ಅವರ ಈ ನಿಲುವಿನ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗಿದೆ. ಆದರೆ, ಮುಕ್ತ ಮನಸ್ಸಿನಿಂದ ಬೆಂಬಲಿಸಲು ಯಾರೂ ಸಿದ್ಧರಿಲ್ಲ. ಇದು ಸಿಎಂ ಅವರ ವೈಯಕ್ತಿಕ ನಿರ್ಧಾರವಾಗಿದ್ದು ಸಮನ್ವಯ ಸಮಿತಿ ಸಭೆಯಲ್ಲೂ ಪ್ರಸ್ತಾಪವಾಗಿಲ್ಲ. ಈ ಕಾರ್ಯಕ್ರಮವನ್ನು ವಿರೋಧಿಸಿದರೆ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ಗ್ರಾಮ ವಾಸ್ತವ್ಯದ ವಾರ್ತೆಯನ್ನು ಸಿಎಂ ಕೊಡುತ್ತಿದ್ದಂತೆ ಕಾಂಗ್ರೆಸಿಗರು ಒಂದು ಬಗೆಯ ಸಂದಿಗ್ಧದಲ್ಲಿ ಮುಳುಗಿದ್ದಾರೆ.

ಸಿದ್ದು ವಿರೋಧಿಸಿದ್ದರು


ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಬಗ್ಗೆ ಈ ಹಿಂದೆ ಸಿದ್ದರಾಮಯ್ಯ ಅವರೇ ಕಟು ಟೀಕೆ ಮಾಡಿದ್ದರು. 2013ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಹಲವು ಬಾರಿ ಎಚ್‌ಡಿಕೆ ಗ್ರಾಮ ವಾಸ್ತವ್ಯವನ್ನು ಸಿದ್ದು ಲೇವಡಿ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ