ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಗುರುನಾನಕ್ ಭವನದಲ್ಲಿ ಸಭೆ ನಡೆಯುತ್ತಿದ್ದಾಗ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಪರ ವಹಿಸಿ ಪ್ರತಿಭಟನೆ ನಡೆಸಿದ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಕಾರ್ಯದರ್ಶಿ ಎಂ.ಕೆ.ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಫೀಕ್, ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಅಮಾನತುಗೊಂಡ ಪ್ರಮುಖರಾಗಿದ್ದಾರೆ. ಜತೆಗೆ 200 ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಈ ಕ್ರಮ ಜರುಗಿಸಿ ಈ ಕುರಿತ ವಿಚಾರಣೆಯನ್ನು ಶಿಸ್ತು ಸಮಿತಿಗೆ ವಹಿಸಲಾಗಿದೆ ಎಂದು ಕೆಪಿಸಿಸಿ ತಿಳಿಸಿದೆ.
ಸುಧಾಕರ್ ಬೆಂಬಲಿಗರ ಅಮಾನತು
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿವೇಣುಗೋಪಾಲ್ ನೇತೃತ್ವದಲ್ಲಿ ಗುರುನಾನಕ್ ಭವನದಲ್ಲಿ ಸಭೆ ನಡೆಯುತ್ತಿದ್ದಾಗ ಚಿಕ್ಕಬಳ್ಳಾಪುರ ಶಾಸಕ ಡಾ...
Vijaya Karnataka 9 Jan 2019, 5:00 am