ಬೆಂಗಳೂರು: ಮತದಾರರ ಓಲೈಕೆಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಕ್ರಮಗಳನ್ನು ಎಸಗುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ದೂರು ನೀಡಲಿದ್ದಾರೆ.
ಬುಧವಾರ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ತೆರಳಲಿರುವ ಕಾಂಗ್ರೆಸ್ ಮುಖಂಡರು ಈ ಕುರಿತಾಗಿ ದಾಖಲೆಗಳನ್ನು ನೀಡಿ ದೂರನ್ನು ದಾಖಲು ಮಾಡಲಿದ್ದಾರೆ.
HD Deve Gowda: ಭಾರತ್ ಜೋಡೋ ಯಾತ್ರೆ ಸಮಾರೋಪಕ್ಕೆ ದೇವೇಗೌಡರಿಗೆ ಆಹ್ವಾನ! ರಾಹುಲ್ ಗಾಂಧಿಗೆ ಮಾಜಿ ಪ್ರಧಾನಿ ಮೆಚ್ಚುಗೆ
ಬುಧವಾರ ಬೆಳಗ್ಗೆ 10.30 ಕ್ಕೆ ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಹೊರಟು ವಸಂತನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ, ರಾಜ್ಯದ ಮುಖ್ಯಮಂತ್ರಿ, ಬಿಜೆಪಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಕೆ ಮಾಡಿಕೊಳ್ಳಲು ಎಸಗುತ್ತಿರುವ ಆಕ್ರಮಗಳ ವಿರುದ್ಧ ದೂರನ್ನು ದಾಖಲು ಮಾಡಲಿದ್ದಾರೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಕೂಡಾ ಗರಿಗೆದರುತ್ತಿವೆ. ಪರಸ್ಪರ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಮತರಾದರರ ಓಲೈಗೆಕೆ ಹಲವು ಕಸರತ್ತುಗಳು ನಡೆಯುತ್ತಿವೆ. ಈ ನಡುವೆ ವಿರೋಧ ಪಕ್ಷ ಕಾಂಗ್ರೆಸ್ ಆಡಳಿತ ಪಕ್ಷ ಬಿಜೆಪಿ ಮುಖಂಡರ ವಿರುದ್ಧ ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ದೂರು ದಾಖಲಿಸಲು ಮುಂದಾಗಿದೆ.
ಈ ಹಿಂದೆ ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು. ಚಿಲುಮೆ ಸಂಸ್ಥೆ ನಡೆಸಿದ ಮತಪಟ್ಟಿ ಅಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಮಾಡಿತ್ತು. ಈ ಬಗ್ಗೆ ಚುನಾವಣಾ ಆಯೋಗದ ಕ್ರಮಕ್ಕೆ ಹಾಗೂ ಮಧ್ಯಪ್ರವೇಶಕ್ಕೆ ಕಾಂಗ್ರೆಸ್ ಆಗ್ರಹ ಮಾಡಿತ್ತು.
ಬುಧವಾರ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ತೆರಳಲಿರುವ ಕಾಂಗ್ರೆಸ್ ಮುಖಂಡರು ಈ ಕುರಿತಾಗಿ ದಾಖಲೆಗಳನ್ನು ನೀಡಿ ದೂರನ್ನು ದಾಖಲು ಮಾಡಲಿದ್ದಾರೆ.
HD Deve Gowda: ಭಾರತ್ ಜೋಡೋ ಯಾತ್ರೆ ಸಮಾರೋಪಕ್ಕೆ ದೇವೇಗೌಡರಿಗೆ ಆಹ್ವಾನ! ರಾಹುಲ್ ಗಾಂಧಿಗೆ ಮಾಜಿ ಪ್ರಧಾನಿ ಮೆಚ್ಚುಗೆ
ಬುಧವಾರ ಬೆಳಗ್ಗೆ 10.30 ಕ್ಕೆ ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಹೊರಟು ವಸಂತನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ, ರಾಜ್ಯದ ಮುಖ್ಯಮಂತ್ರಿ, ಬಿಜೆಪಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಕೆ ಮಾಡಿಕೊಳ್ಳಲು ಎಸಗುತ್ತಿರುವ ಆಕ್ರಮಗಳ ವಿರುದ್ಧ ದೂರನ್ನು ದಾಖಲು ಮಾಡಲಿದ್ದಾರೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಕೂಡಾ ಗರಿಗೆದರುತ್ತಿವೆ. ಪರಸ್ಪರ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಮತರಾದರರ ಓಲೈಗೆಕೆ ಹಲವು ಕಸರತ್ತುಗಳು ನಡೆಯುತ್ತಿವೆ. ಈ ನಡುವೆ ವಿರೋಧ ಪಕ್ಷ ಕಾಂಗ್ರೆಸ್ ಆಡಳಿತ ಪಕ್ಷ ಬಿಜೆಪಿ ಮುಖಂಡರ ವಿರುದ್ಧ ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ದೂರು ದಾಖಲಿಸಲು ಮುಂದಾಗಿದೆ.
ಈ ಹಿಂದೆ ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು. ಚಿಲುಮೆ ಸಂಸ್ಥೆ ನಡೆಸಿದ ಮತಪಟ್ಟಿ ಅಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಮಾಡಿತ್ತು. ಈ ಬಗ್ಗೆ ಚುನಾವಣಾ ಆಯೋಗದ ಕ್ರಮಕ್ಕೆ ಹಾಗೂ ಮಧ್ಯಪ್ರವೇಶಕ್ಕೆ ಕಾಂಗ್ರೆಸ್ ಆಗ್ರಹ ಮಾಡಿತ್ತು.