ಆ್ಯಪ್ನಗರ

ಕಾಂಗ್ರೆಸ್‌ಗೆ ಲೋಕಲ್‌ ಜಯ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್‌ ಹಿಂದಿಕ್ಕಿದ 'ಕೈ'

ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಬಿಜೆಪಿ ನಗರ ಸ್ಥಳೀಯ ಸಂಸ್ಥೆಗಳಲ್ಲಿಉತ್ತಮ ಪ್ರದರ್ಶನ ನೀಡುವಲ್ಲಿ ಸೋತಿದೆ. ಆದರೆ ಉಪ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪ್ರತಿಪಕ್ಷ ಕಾಂಗ್ರೆಸ್‌ ಚೇತರಿಸಿಕೊಂಡಿದೆ. ಜೆಡಿಎಸ್‌ ಎಂದಿನಂತೆ ಅತ್ಯಂತ ಕಳಪೆ ಸಾಧನೆ ಮಾಡಿದೆ.

Vijaya Karnataka 11 Feb 2020, 9:01 pm
ಬೆಂಗಳೂರು: ರಾಜ್ಯದ ಒಟ್ಟು 6 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮುಗ್ಗರಿಸಿದ್ದು, ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಒಟ್ಟು 167 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 69, ಬಿಜೆಪಿ 59 ಹಾಗೂ ಜೆಡಿಎಸ್‌ 15 ಸ್ಥಾನಗಳನ್ನು ಗೆದ್ದಿವೆ.
Vijaya Karnataka Web Congress


ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಬಿಜೆಪಿ ನಗರ ಸ್ಥಳೀಯ ಸಂಸ್ಥೆಗಳಲ್ಲಿಉತ್ತಮ ಪ್ರದರ್ಶನ ನೀಡುವಲ್ಲಿ ಸೋತಿದೆ. ಆದರೆ ಉಪ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪ್ರತಿಪಕ್ಷ ಕಾಂಗ್ರೆಸ್‌ ಚೇತರಿಸಿಕೊಂಡಿದೆ. ಜೆಡಿಎಸ್‌ ಎಂದಿನಂತೆ ಅತ್ಯಂತ ಕಳಪೆ ಸಾಧನೆ ಮಾಡಿದೆ.

ಹೊಸಕೋಟೆ ನಗರಸಭೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಚಿಕ್ಕಬಳ್ಳಾಪುರ, ಹುಣಸೂರು ಮತ್ತು ಸಿರಗುಪ್ಪ ನಗರಸಭೆಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಖಾತರಿಯಾಗಿದೆ. ಸಿಂಧಗಿ ಪುರಸಭೆಯೂ ಕಾಂಗ್ರೆಸ್‌ಗೆ ದಕ್ಕಿದೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ವಶದಲ್ಲಿದ್ದ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಬಿಜೆಪಿ ಪಾಲಾಗಿದೆ.

ಹೊಸಕೋಟೆ ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 22 ಸ್ಥಾನ ಗೆದ್ದಿದೆ. ಈ ಮೂಲಕ ವಿಧಾನಸಭೆ ಉಪಚುನಾವಣೆ ಸೋಲಿಗೆ ಮಾಜಿ ಸಚಿವ ಎಂಟಿಬಿ ನಾಗರಾಜ್‌ ಸೇಡು ತೀರಿಸಿಕೊಂಡಿದ್ದಾರೆ. ನಗರಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ್ದು ಶೂನ್ಯ ಸಂಪಾದನೆ. ಪಕ್ಷೇತರ ಶಾಸಕ ಶರತ್‌ ತಮ್ಮ ಬೆಂಬಲಿಗ 7 ಮಂದಿಯನ್ನು ಗೆಲ್ಲಿಸಿಕೊಳ್ಳುವುದಕ್ಕೆ ಸೀಮಿತರಾಗಿದ್ದಾರೆ.

ಆದರೆ, ಚಿಕ್ಕಬಳ್ಳಾಪುರದಲ್ಲಿ ನೂತನ ಸಚಿವ ಡಿ. ಸುಧಾಕರ್‌ ಅವರು ಬಿಜೆಪಿಗೆ ಗೆಲುವು ತಂದುಕೊಡುವಲ್ಲಿ ವಿಫಲರಾಗಿದ್ದಾರೆ. ಒಟ್ಟು 31 ಸದಸ್ಯ ಬಲದ ಚಿಕ್ಕಬಳ್ಳಾಪುರ ನಗರಸಭೆಗೆ ಬಿಜೆಪಿಯ 9 ಮಂದಿ ಆಯ್ಕೆಯಾಗಿದ್ದು, ಕಾಂಗ್ರೆಸ್‌ 16 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯುತ್ತಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ದು ಮೊದಲ ಸ್ಥಾನದಲ್ಲಿದೆ. ಆಡಳಿತಾರೂಢ ಬಿಜೆಪಿಗೆ ಮುಖಭಂಗವಾಗಿದೆ. ಸಿರಗುಪ್ಪ, ಹುಣಸೂರು, ಚಿಕ್ಕಬಳ್ಳಾಪುರದಲ್ಲಿ ಪಕ್ಷಕ್ಕೆ ಅಧಿಕಾರ ಸಿಗುತ್ತಿದೆ. ಚುನಾವಣೆಯಲ್ಲಿ ಉತ್ತಮವಾಗಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಕೃತಜ್ಞತೆಗಳು.
- ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ


ಹುಣಸೂರು ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿಗೆ ಕೇವಲ 3 ಸ್ಥಾನಗಳು ಸಿಕ್ಕಿದ್ದು, ಕಾಂಗ್ರೆಸ್‌ 14 ಮತ್ತು ಜೆಡಿಎಸ್‌ 7 ಸ್ಥಾನಗಳನ್ನು ಗೆದ್ದಿವೆ. ಇಲ್ಲಿ ಕಾಂಗ್ರೆಸ್‌ ಶಾಸಕ ಎಚ್‌.ಪಿ. ಮಂಜುನಾಥ್‌ ಮತ್ತೆ ತಮ್ಮ ಪ್ರಾಬಲ್ಯ ಮೆರೆದಿದ್ದರೆ, ಮಾಜಿ ಸಚಿವ ಎಚ್‌. ವಿಶ್ವನಾಥ್‌ಗೆ ಮತ್ತೆ ನಿರಾಸೆಯಾಗಿದೆ. ಸಿರಗುಪ್ಪದಲ್ಲಿ ಕಾಂಗ್ರೆಸ್‌ 19 ಮತ್ತು ಬಿಜೆಪಿ 11 ಸ್ಥಾನ ಗೆದ್ದಿವೆ. ಇಲ್ಲಿ ಸ್ಥಳೀಯ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಬಿಜೆಪಿ ಸೇರಿದ್ದರೂ ಕಾಂಗ್ರೆಸ್‌ ಗೆಲುವು ತೀವ್ರ ಮುಖಭಂಗ ತಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ