ಆ್ಯಪ್ನಗರ

ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಕಾಂಗ್ರೆಸ್ ಅಡ್ಡಗಾಲು ದೌರ್ಭಾಗ್ಯ

ಶ್ರೀ ಶ್ರಿ ರವಿಶಂಕರ್ ಗುರೂಜಿ ಸಾರಥ್ಯದಲ್ಲಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುವ ಮೂಲಕ ಅಡ್ಡಗಾಲು ಹಾಕಿದ್ದು ದೌರ್ಭಾಗ್ಯದ ಸಂಗತಿ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವ ಗಿರಿರಾಜ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ವಿಕ ಸುದ್ದಿಲೋಕ 12 Mar 2016, 4:08 am
ಬೆಂಗಳೂರು: ಶ್ರೀ ಶ್ರಿ ರವಿಶಂಕರ್ ಗುರೂಜಿ ಸಾರಥ್ಯದಲ್ಲಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುವ ಮೂಲಕ ಅಡ್ಡಗಾಲು ಹಾಕಿದ್ದು ದೌರ್ಭಾಗ್ಯದ ಸಂಗತಿ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವ ಗಿರಿರಾಜ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
Vijaya Karnataka Web congress world cultural festival preventing
ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಕಾಂಗ್ರೆಸ್ ಅಡ್ಡಗಾಲು ದೌರ್ಭಾಗ್ಯ


ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘‘ಶ್ರೀ ಶ್ರೀ ರವಿಶಂಕರ್ ಗುರೂಜಿ ಮಾನವ ಪರಿಸರ ಹಾಗೂ ನೈಸರ್ಗಿಕ ಪರಿಸರವನ್ನು ಕಾಪಾಡುವವರು. ವಿಶ್ವ ಶಾಂತಿಗಾಗಿ ಗುರೂಜಿ ನೇತೃತ್ವದಲ್ಲಿ ಕಾರ‌್ಯಕ್ರಮ ನಡೆಯುತ್ತಿದೆ. ಭಯೋತ್ಪಾದಕರನ್ನು ಬೆಂಬಲಿಸುವವರು ಧಾರ್ಮಿಕ ಗುರುಗಳನ್ನು ಬೆಂಬಲಿಸದಿರುವುದು ವಿಷಾದನೀಯ ಸಂಗತಿ,’’ ಎಂದರು.

ಉದ್ಯಮಿ ವಿಜಯ್ ಮಲ್ಯ ದೇಶ ಬಿಡಲು ಕೇಂದ್ರದ ಪರೋಕ್ಷ ಬೆಂಬಲವಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು,‘‘ಮಲ್ಯ ಅವರಿಗೆ ಬ್ಯಾಂಕ್‌ಗಳಲ್ಲಿ ಸಾಲ ಕೊಡಿಸಿ ಬೆಳೆಸಿದವರೇ ಇದೀಗ ಅನಗತ್ಯವಾಗಿ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ,’’ಎಂದು ತಿರುಗೇಟು ನೀಡಿದರು.

‘‘ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಲೇಬೇಕು. ಉದ್ಯಮಿ ಮಲ್ಯ ಅವರಿಗೂ ಅದು ಅನ್ವಯವಾಗಲಿದೆ. ಯಾರನ್ನೂ ಸರಕಾರ ರಕ್ಷಿಸುವ ಪ್ರಶ್ನೆಯೇ ಇಲ್ಲ,’’ಎಂದು ಅವರು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ