ಆ್ಯಪ್ನಗರ

‘ಅವಿಶ್ವಾಸ ನಿರ್ಣಯದ ಬಗ್ಗೆ ಕಾಂಗ್ರೆಸ್‌ನವರು ಈವರೆಗೂ ನಮ್ಮನ್ನು ಸಂಪರ್ಕಿಸಿಲ್ಲ’; ಎಚ್‌ಡಿ ಕುಮಾರಸ್ವಾಮಿ

ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಹೋರಾಟ ಆರಂಭಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಾವು ಪ್ರತಿಭಟನೆ ಮಾಡುತ್ತೇವೆ. ತರಾತುರಿಯಲ್ಲಿ ಈ ಕಾಯ್ದೆಯ ಸುಗ್ರೀವಾಜ್ಞೆ ತರುವ ಅಗತ್ಯವೇನಿತ್ತು? ಎಂದು ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Vijaya Karnataka Web 25 Sep 2020, 12:39 pm
ಬೆಂಗಳೂರು: ನಿನ್ನೆ ಕಾಂಗ್ರೆಸ್ ಪಕ್ಷದವರು ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಮಾಡಿದ್ದಾರೆ. ಆದರೆ ಈ ವರೆಗೂ ಕಾಂಗ್ರೆಸ್‌ ಪಕ್ಷದ ಯಾವುದೇ ಸ್ನೇಹಿತರು ನಮ್ಮನ್ನು ಈವರೆಗೆ ಸಂಪರ್ಕಿಸಿಲ್ಲ ಎಂದು ಮಾಜಿ ಸಿಎಂ ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web cm kumarswamy
HD Kumaraswamy (File Photo)


ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದಕ್ಕೂ ಮುನ್ನ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ಅಭಿಪ್ರಾಯವನ್ನೂ ಕೇಳಿಲ್ಲ. ಕಾಂಗ್ರೆಸ್‌ ಮುಖಂಡರ ವರ್ತನೆ ಹೇಗಿದೆಯೆಂದರೆ ಅವರಿಗೆ ನಮ್ಮ ಬೆಂಬಲ ಅಗತ್ಯವಿಲ್ಲ ಎಂದೆನಿಸುತ್ತಿದೆ. ಸ್ವತಂತ್ರವಾಗಿ ಹೋರಾಟ ಮಾಡಲು ಅವರು ನಿರ್ಧರಿಸಿರುವಂತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆಯ ಕೊರೊನಾ ರಿಪೋರ್ಟ್ ಗೊಂದಲ; ಸದನದಲ್ಲಿ ಚರ್ಚೆಗೆ ಗ್ರಾಸವಾದ ವರದಿ

ಇನ್ನು ಸಿಎಂ ಬಿಎಸ್‌ವೈ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಪ್ರಸ್ತಾಪದ ಬಗ್ಗೆ ಕಾಂಗ್ರೆಸ್‌ನವರು ನಮ್ಮನ್ನು ಸಂಪರ್ಕಿಸಿಲ್ಲಿ, ಚರ್ಚಿಸಿದರೆ ಆಮೇಲೆ ನೋಡೋಣ. ಈಗ ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಇಂತಹ ಸಮಯದಲ್ಲಿ ಗೊಂದಲ ಮೂಡುವುದು ಬೇಕಾ? ಅವರು ಯಾಕೆ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ.
ರೈತ ಸಂಘಟನೆಗಳಿಂದ ಭುಗಿಲೆದ್ಧ ಪ್ರತಿಭಟನೆ: ಬಸ್ ಗಳಿಗೆ ಕಲ್ಲು ತೂರಾಟ, ರೈತರ ಬಂಧನ

ಸಿಎಂ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗ ಯಾವ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಇಲ್ಲ ಹೇಳಿ. ಎಲ್ಲರ ವಿರುದ್ಧವೂ ಆರೋಪವಿದೆ ಎಂದು ಹೇಳಿದರು. ಜೊತೆಗೆ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಹೋರಾಟ ಆರಂಭಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಾವು ಪ್ರತಿಭಟನೆ ಮಾಡುತ್ತೇವೆ. ತರಾತುರಿಯಲ್ಲಿ ಈ ಕಾಯ್ದೆಯ ಸುಗ್ರೀವಾಜ್ಞೆ ತರುವ ಅಗತ್ಯವೇನಿತ್ತು? ರೈತರು, ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ