ಆ್ಯಪ್ನಗರ

ಸಿದ್ದರಾಮಯ್ಯ ಕರೆದಾಗ ಸಮನ್ವಯ ಸಮಿತಿ ಸಭೆ: ಹೈಕಮಾಂಡ್‌ ಅನುಮತಿ ಬೇಡ

ಸಮನ್ವಯ ಸಮಿತಿ ಸಭೆಗೆ ಹೈ ಕಮಾಂಡ್ ಸೂಚನೆ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 25 Jul 2018, 5:04 pm
ಮಂಡ್ಯ: ಸಮನ್ವಯ ಸಮಿತಿ ಸಭೆಗೆ ಹೈ ಕಮಾಂಡ್ ಸೂಚನೆ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
Vijaya Karnataka Web pram


ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 2 ತಿಂಗಳಿಗೊಮ್ಮೆ ಸಭೆ ಸೇರಬೇಕು ಎಂದುಕೊಂಡಿದ್ದೇವೆ. ಸಮಿತಿ ಸಭೆಗೂ ಹೈಕಮಾಂಡ್‌ಗೂ ಸಂಬಂಧ ಇಲ್ಲ. ಅಗತ್ಯವೆನಿಸಿದ ಸಮಯದಲ್ಲಿ ಅಧ್ಯಕ್ಷರು ಸಭೆ ಕರೆಯುತ್ತಾರೆ. ಈ ತಿಂಗಳು ಸಭೆ ಕರೆಯುವ ಸಾಧ್ಯತೆಗಳೂ ಇವೆ ಎಂದು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್‌ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಅವರನ್ನು ರಾಷ್ಟ್ರಮಟ್ಟದ ಕಾರ್ಯನಿರ್ವಹಣಾ ಸಮಿತಿಗೆ ಸೇರಿಸಿಕೊಳ್ಳಲಾಗಿದೆ. ಹೀಗೆಂದ ಮಾತ್ರಕ್ಕೆ ಅವರು ರಾಷ್ಟ್ರ ರಾಜಕಾರಣ ಪ್ರವೇಶ ಮಾಡಿದ್ದಾರೆಂದಲ್ಲ. ಈ ಬಗ್ಗೆ ಇನ್ನೂ ಸ್ಪಷ್ಟನೆ ಬೇಕಾದಲ್ಲಿ ಅವರೇ ಉತ್ತರ ಹೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಪರಮೇಶ್ವರ ಉತ್ತರಿಸಿದರು.

ಮಾಜಿ ಸ್ಪೀಕರ್‌ ಕೋಳಿವಾಡ ಹಾಗೂ ರಾಜಣ್ಣ ಪಕ್ಷ ವಿರೋಧಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್‌, ಪಕ್ಷದ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಇಬ್ಬರಿಗೂ ನೋಟಿಸ್‌ ನೀಡಿದ್ದಾರೆ. ನೋಟಿಸ್‌ಗೆ ಬರುವ ಉತ್ತರವನ್ನು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

ವರದಿ ಜಾರಿಗೆ ಚಿಂತನೆ

ಮಂಡ್ಯದಲ್ಲಿ ನಡೆದ ಲಾಕಪ್‌ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲಾಖಾ ತನಿಖೆ ನಡೆಸಲಾಗುತ್ತಿದ್ದು, ವರದಿ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಔರಾದ್ಕರ್‌ ವರದಿ ವಿಚಾರವನ್ನು ಈಗಾಗಲೇ 6ನೇ ವೇತನ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ವರದಿ ಜಾರಿ ಸಂಬಂಧ ಚಿಂತನೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಚರ್ಚಿಸಿಲ್ಲ

ಏತನ್ಮಧ್ಯೆ ಮೂವರು ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರ್ಫಡೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದಿಲ್ಲ ಎಂದರು. ಅಂತೆಯೇ ಲೋಕಸಭೆ ಆಭ್ಯರ್ಥಿ ಆಯ್ಕೆ, ಟಿಕೆಟ್‌ ಹಂಚಿಕೆ ಸಂಬಂಧ ಈ ವರೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ