ಆ್ಯಪ್ನಗರ

ಕೊರೊನಾ: ಮಹಾರಾಷ್ಟ್ರದಿಂದ ಬಂದವರೇ ಹೆಚ್ಚು! ಆದರೂ, ವಲಸೆ ತಡೆಗೆ ಕ್ರಮ ಇಲ್ಲವೇಕೆ?

ಶನಿವಾರ ಒಂದೇ ದಿನ ರಾಜ್ಯದಲ್ಲಿ 196 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ 174 ಜನ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಷ್ಟಾದರೂ ಯಡಿಯೂರಪ್ಪನವರು ಮಹಾರಾಷ್ಟ್ರದಿಂದ ವಲಸೆ ಬರುವುದನ್ನು ತಡೆಯಲು ಕ್ರಮ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

Vijaya Karnataka Web 23 May 2020, 3:51 pm
ಬೆಂಗಳೂರು: ಶನಿವಾರ ಒಂದೇ ದಿನ ರಾಜ್ಯದಲ್ಲಿ 196 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ 174 ಜನ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ. ಇಷ್ಟಾದರೂ ಯಡಿಯೂರಪ್ಪನವರು ಮಹಾರಾಷ್ಟ್ರದಿಂದ ವಲಸೆ ಬರುವುದನ್ನು ತಡೆಯಲು ಕ್ರಮ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆ ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
Vijaya Karnataka Web coronavirus


ಶನಿವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಕೊರೊನಾ ಹೆಲ್ತ್‌ ಬುಲೆಟಿನ್‌ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಶನಿವಾರ ಒಂದೇ ದಿನ 196 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದವರೇ ಇದ್ದಾರೆ. ಅದರಲ್ಲೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದಿರುವವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ರಾಜ್ಯದೆಲ್ಲೆಡೆ ಆತಂಕಕ್ಕೆ ಕಾರಣವಾಗಿದೆ.

ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ, ಹೊಸ ಪ್ರಕರಣದಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಆಗಮಿಸಿದವರಿದ್ದಾರೆ ಎಂದು ತಿಳಿದುಬಂದರೂ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ರಾಜ್ಯದ ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ.

ಒಂದೇ ದಿನ 196 ಸೋಂಕು: ದ್ವಿಶತಕದತ್ತ ಕೊರೊನಾ ಕೇಸ್‌! ಬಹುತೇಕವು 'ಮಹಾ' ಪ್ರಸಾದ!

ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿವೆ. ಶನಿವಾರ ಒಂದೇ ದಿನ 196 ಪ್ರಕರಣಗಳು ದೃಢವಾಗಿವೆ. 196 ಪ್ರಕರಣಗಳ ಪೈಕಿ 174ಜನ ಮಹಾರಾಷ್ಟ್ರದ ನಂಟು ಹೊಂದಿದ್ದಾರೆ. ಇಷ್ಟಾದರೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ತಡೆ ಒಡ್ಡತ್ತಿಲ್ಲ ಏಕೆ ಎಂಬ ಪ್ರಶ್ನೆ ಎದುರಾಗಿದೆ.

ಮಹಾರಾಷ್ಟ್ರ ಕೊರೋನಾದಿಂದ ತತ್ತರಿಸಿದೆ. ದೇಶದಲ್ಲೇ ಅತಿಹೆಚ್ಚು ಸಂಖ್ಯೆಯ ಕೋವಿಡ್‌ -19 ಸೋಂಕಿತರು ಅಲ್ಲಿದ್ದಾರೆ. ಅದರಲ್ಲೂ ಮಹಾರಾಷ್ಟ್ರದ ಮುಂಬಯಿ, ಥಾಣೆ, ಪುಣೆ, ಮಾಲೇಂಗಾವ ಹಾಗೂ ಔರಂಗಾಬಾದ್‌ಗಳಲ್ಲಿ ಕೋವಿಡ್‌ -19 ವ್ಯಾಪಕವಾಗಿದೆ. ಹೀಗಾಗಿ ಅಲ್ಲಿನ ಕಾರ್ಮಿಕರು, ಉದ್ಯೋಗಿಗಳು ಊರಿನತ್ತ ಮುಖ ಮಾಡಿದ್ದಾರೆ.

ಕೊರೊನಾ ನಡುವೆ ಶಾಲೆ ಆರಂಭದ ಆತಂಕ, ಮಕ್ಕಳನ್ನು ನಿಭಾಯಿಸುವುದು ಸಾಧ್ಯವೇ?

ಈ ಮೊದಲು ತಬ್ಲಿಘಿಗಳಿಂದ ದೇಶಾದ್ಯಂತ ಕೊರೊನಾ ವೈರಸ್‌ ಹರಡಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದವರು ದೇಶದ ವಿವಿಧೆಡೆ ತೆರಳುತ್ತಿದ್ದಾರೆ. ಅವರಲ್ಲಿ ಬಹುತೇಕರು ಸೋಂಕನ್ನು ಅಂಟಿಸಿಕೊಂಡು, ತಾವು ಹೋದಲ್ಲೆಲ್ಲ ಹರಡುತ್ತಿದ್ದಾರೆ. ಕರ್ನಾಟಕದ ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದವರ ಪಾಲೇ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

ಈ ನಡುವೆ ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಕುರಿತಾಗಿ ಚರ್ಚೆಗಳು ಆರಂಭಗೊಂಡಿದ್ದು ವಿರೋಧ ಪಕ್ಷಗಳು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮುಗಿಬೀಳಲು ಸಿದ್ಧತೆ ನಡೆಸಿದ್ದಾರೆ.

ಕೊರೊನಾ ವೈರಸ್‌ ಆರಂಭದ ದಿನಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸುಮ್ಮನಿದ್ದವು. ಆದರೆ, ಇತ್ತೀಚೆಗೆ ಸರಕಾರದ ವಿರುದ್ಧ ದನಿ ಎತ್ತಲು ಆರಂಭಿಸಿವೆ. ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರಿಗೂ ತಮ್ಮ ಶಕ್ತಿ ಪ್ರದರ್ಶನ ತೋರಿಸಲು ಇದು ಸಕಾಲವಾಗಿದೆ.

ಮುಂದಿನ ದಿನಗಳಲ್ಲಿ ಕೊರೊನಾ ನಿರ್ವಹಣೆ ಅಸ್ತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಅವರೂ ಸಜ್ಜಾಗಿದ್ದಾರೆ. ಈ ನಡುವೆ ಲಾಕ್ಡೌನ್ ಪರಿಣಾಮ ರೈತರ ಸಂಕಷ್ಟ, ವಿವಿಧ ಸಮುದಾಯಗಳ ಜನರು ಅನುಭವಿಸುತ್ತಿರುವ ಸಮಸ್ಯೆಗಳು, ನಿರುದ್ಯೋಗ, ವಲಸೆ ಕಾರ್ಮಿಕರ ಸಮಸ್ಯೆ, ಸರ್ಕಾರದ ಗೊಂದಲದ ನಡೆಗಳು ಜನರಲ್ಲೂ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಕಾರಣವಾಗಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ