ಆ್ಯಪ್ನಗರ

ರಾಜ್ಯದಲ್ಲಿ ಕೊರೊನಾ ಕೇಸ್‌ ಇಳಿಕೆ, 50 ಸಾವಿರದತ್ತ ಸಕ್ರಿಯ ಪ್ರಕರಣ

ಕಳೆದ 24 ಗಂಟೆಗಳ ಅವಧಿಯಲ್ಲಿ 28 ಜನರು ರಾಜ್ಯದಲ್ಲಿ ಕೋವಿಡ್‌ನಿಂದ ಅಸುನೀಗಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ 17 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 11,168ಕ್ಕೆ ಏರಿಕೆಯಾಗಿದೆ.

Vijaya Karnataka 31 Oct 2020, 7:53 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಲೇ ಸಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರದತ್ತ ಇಳಿಯುತ್ತಿದೆ.
Vijaya Karnataka Web coronavirus test


ಶನಿವಾರ 1,01,556 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಕೇವಲ 3,014 ಆಗಿದ್ದು, ಪಾಸಿಟಿವಿ ದರ ಶೇ.3ಕ್ಕಿಂತ ಕೆಳಗಿಳಿದಿದೆ. ಶನಿವಾರ ಪರೀಕ್ಷೆಗೊಳಪಡಿಸಿದ ಸ್ಯಾಂಪಲ್‌ಗಳಲ್ಲಿ ಶೇ. 2.96 ಜನರಲ್ಲಿ ಮಾತ್ರ ಸೋಂಕು ಇರುವುದು ಖಚಿತವಾಗಿದೆ.

ಇದರೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 1,621 ಜನರಲ್ಲಿ ಸೋಂಕು ದೃಢಪಟ್ಟಿದ್ದರೆ, ಹಾಸನದಲ್ಲಿ 173, ಮೈಸೂರಿನಲ್ಲಿ 161, ವಿಜಯಪುರದಲ್ಲಿ 122 ಜನರಲ್ಲಿ ಹೊಸದಾಗಿ ಕೋವಿಡ್‌ ಸೋಂಕು ಇರುವುದು ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ಖಚಿತವಾಗಿವೆ.

ಇದೇ ವೇಳೆ 28 ಜನರು ಕೋವಿಡ್‌ನಿಂದ ಅಸುನೀಗಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ 17 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 11,168ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ 7,468 ಸೋಂಕಿತರು ಚೇತರಿಸಿಕೊಂಡಿದ್ದು, ರಾಜ್ಯದಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 7,57,208ಕ್ಕೆ ಏರಿಕೆಯಾಗಿದೆ. ಸದ್ಯ 55,017 ಸೋಂಕಿತರಷ್ಟೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 956 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿವರಗಳು ಕೆಳಗಿನ ಪಟ್ಟಿಯಲ್ಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ