ಆ್ಯಪ್ನಗರ

ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ ಏರಿಕೆ, ಲಕ್ಷಕ್ಕಿಂತ ಕೆಳಗಿಳಿದ ಸಕ್ರಿಯ ಕೇಸ್‌

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 63,784 ಸ್ಯಾಂಪಲ್‌ಗಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೊಸದಾಗಿ 8,364 ಜನರಲ್ಲಿ‌‌ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ.

Vijaya Karnataka 19 Sep 2020, 9:17 pm
ಬೆಂಗಳೂರು: ಕೋವಿಡ್‌-19ನಿಂದ ಚೇತರಿಸಿಕೊಂಡವರ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಒಂದು ಲಕ್ಷಕ್ಕಿಂತ ಕೆಳಕ್ಕಿಳಿದಿದೆ. ಸದ್ಯ ರಾಜ್ಯದಲ್ಲಿ 98,564 ಆಕ್ಟಿವ್‌ ಕೊರೊನಾ ಕೇಸ್‌ಗಳಿವೆ.
Vijaya Karnataka Web corona test


ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 10,815 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 4 ಲಕ್ಷ ದಾಟಿದ್ದು 4,04,841ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಹೊಸದಾಗಿ 8,364 ಜನರಲ್ಲಿ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ.

ಮುಖ್ಯವಾಗಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ರಾಜಧಾನಿಯಲ್ಲಿ 3,733 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಮೈಸೂರಿನಲ್ಲಿ 626, ದಕ್ಷಿಣ ಕನ್ನಡದಲ್ಲಿ 432, ಗದಗದಲ್ಲಿ 391, ಬಳ್ಳಾರಿಯಲ್ಲಿ 300, ಧಾರವಾಡದಲ್ಲಿ 264, ಉಡುಪಿಯಲ್ಲಿ 215 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ 200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.

ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 114 ಜನರು ಅಸುನೀಗಿದ್ದು, ಇಲ್ಲಿಯವರೆಗೆ ಕೋವಿಡ್‌ ಸೋಂಕಿನಿಂದ ಸತ್ತವರ ಸಂಖ್ಯೆ 8,364ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 33, ಮೈಸೂರಿನಲ್ಲಿ 12 ಜನರು ಕೋವಿಡ್‌ನಿಂದ ನಿಧನರಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 98,564 ಸೋಂಕಿತರಿದ್ದು, ಇವರಲ್ಲಿ 822 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 255, ಧಾರವಾಡದಲ್ಲಿ 91, ಬಳ್ಳಾರಿಯಲ್ಲಿ 70 ಹಾಗೂ ಹಾಸನದಲ್ಲಿ 62 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ