ಆ್ಯಪ್ನಗರ

ರಾಜ್ಯದಲ್ಲಿ ಕೊರೊನಾ ಪ್ರಕರಣ ಅಲ್ಪ ಇಳಿಕೆ, ಹಾವೇರಿಯಲ್ಲಿ ಸತತ 2ನೇ ದಿನ ಝೀರೋ ಕೇಸ್‌

ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗಿದ್ದು, ಹಾವೇರಿಯಲ್ಲಿ ಸತತ ಎರಡನೇ ದಿನವೂ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. ಯಾದಗಿರಿ ಮತ್ತು ರಾಮನಗರದಲ್ಲಿ ಕೂಡ ಶನಿವಾರ ಯಾವುದೇ ಕೇಸ್‌ ದೃಢಪಟ್ಟಿಲ್ಲ.

Vijaya Karnataka 9 Jan 2021, 9:32 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಮುಂದುವರಿದಿದ್ದು, ಶುಕ್ರವಾರಕ್ಕೆ ಹೋಲಿಸಿದರೆ ಶನಿವಾರ ಹೊಸ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಅಲ್ಪ ಇಳಿಕೆಯಾಗಿದೆ.
Vijaya Karnataka Web Coronavirus testing


ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 899 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಕೋವಿಡ್‌-19 ಪ್ರಕರಣಗಳ ಸಂಖ್ಯೆ 9,26,767ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಸಾವಿಗೀಡಾದವರ ಸಂಖ್ಯೆ 12,138 ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಮೂವರು ಹಾಗೂ ಮೈಸೂರಿನಲ್ಲಿ ಒಬ್ಬರು ಸೋಂಕಿನಿಂದ ಅಸುನೀಗಿದ್ದಾರೆ.

ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದ್ದು, 899 ಪ್ರಕರಣಗಳಲ್ಲಿ 465 ಬೆಂಗಳೂರಿನಲ್ಲಿಯೇ ವರದಿಯಾಗಿವೆ. ಹಾವೇರಿಯಲ್ಲಿ ಸತತ ಎರಡನೇ ದಿನವೂ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. ಯಾದಗಿರಿ ಮತ್ತು ರಾಮನಗರ ಕೂಡ ಇದೇ ಸಾಲಿಗೆ ಸೇರ್ಪಡೆಯಾಗಿವೆ. ಇದಲ್ಲದೆ ಇನ್ನೂ 9 ಜಿಲ್ಲೆಗಳಲ್ಲಿ ಒಂದಂಕಿ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಮುಂದುವರೆದ ಕೊರೊನಾ ಏರಿಳಿತ..! ಬೆಂಗಳೂರಲ್ಲಿ 479, ಹಾವೇರಿಯಲ್ಲಿ 'ಝೀರೋ' ಕೇಸ್‌

ಬ್ರಿಟನ್‌ನಿಂದ ಆಗಮಿಸಿದವರಲ್ಲಿ ಇಲ್ಲಿಯವರೆಗೆ 40 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರ ಸಂಪರ್ಕದಿಂದ ಮತ್ತೆ 26 ಜನರಿಗೆ ಸೋಂಕು ಹರಡಿದೆ. ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ರೂಪಾಂತರಗೊಂಡ ಕೊರೊನಾ ಸೋಂಕು ಮಾತ್ರ 11 ಜನರಲ್ಲಿ ಪತ್ತೆಯಾಗಿದೆ.

ಚೇತರಿಕೆಯಲ್ಲಿ ಅಲ್ಪ ಇಳಿಕೆ

ಪಾಸಿಟಿವ್‌ ಪ್ರಕರಣಗಳಿಗೆ ಹೋಲಿಸಿದರೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶನಿವಾರ ಒಟ್ಟು 872 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸದ್ಯ 9,452 ಸಕ್ರಿಯ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿವೆ. ಇವರಲ್ಲಿ 202 ರೋಗಿಗಳಿಗೆ ಮಾತ್ರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ