ಆ್ಯಪ್ನಗರ

'ಸಾಮಾಜಿಕ ಅಂತರ' ಮರೆತ ಶ್ರೀರಾಮುಲು ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

ಸಚಿವ ಸ್ಥಾನದ ಜವಾಬ್ದಾರಿ ಮರೆತು ಶ್ರೀರಾಮುಲು ಸೇಬಿನ ಹಾರ ಹಾಕಿಸಿಕೊಂಡು ಮೆರೆದಾಡಿದ್ದು, ಕಾನೂನು ಮುರಿದಿದ್ದಾರೆ. ಈ ತಪ್ಪಿನ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಎಸ್‌ ಉಗ್ರಪ್ಪ ಆಗ್ರಹಿಸಿದ್ದಾರೆ.

Vijaya Karnataka 2 Jun 2020, 7:26 pm

ಬೆಂಗಳೂರು: ಚಿತ್ರದುರ್ಗದಲ್ಲಿ ವೇದಾವತಿ ನದಿಗೆ ಬಾಗಿನ ಅರ್ಪಣೆ ಸಂದರ್ಭದಲ್ಲಿ ಸಾವಿರಾರು ಜನರ ಗುಂಪು ಸೇರಿಸಿ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೇಲೆ ಪ್ರಕರಣ ದಾಖಲಿಸಲು ಕಾಂಗ್ರೆಸ್‌ ಆಗ್ರಹಿಸಿದೆ.
Vijaya Karnataka Web VS Ugrappa


ಯಾವ ಸುರಕ್ಷತಾ ಕ್ರಮವಿಲ್ಲದೆ ಸಾವಿರಾರು ಜನರನ್ನು ಸೇರಿಸಲಾಗಿದೆ. ಮಾಸ್ಕ್‌ ಇಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸಚಿವ ಸ್ಥಾನದ ಜವಾಬ್ದಾರಿ ಮರೆತು ಶ್ರೀರಾಮುಲು ಸೇಬಿನ ಹಾರ ಹಾಕಿಸಿಕೊಂಡು ಮೆರೆದಾಡಿದ್ದು, ಕಾನೂನು ಮುರಿದಿದ್ದಾರೆ. ಈ ತಪ್ಪಿನ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲವಾದರೆ, ಸಿಎಂ ಆವರೇ ಶ್ರೀರಾಮುಲು ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಮಾಜಿ ಸಂಸದ ವಿಎಸ್‌ ಉಗ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಸಾಮಾಜಿಕ ಅಂತರ ಮರೆತು ಸೇಬಿನ ಹಾರ, ಹೂವಿನ ಮಳೆಯಲ್ಲಿ ಮಿಂದ ಆರೋಗ್ಯ ಸಚಿವರು!

ಜನರು ಮದುವೆ ಮಾಡಿದರೆ ಹೆಚ್ಚು ಜನ ಸೇರಿಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗುತ್ತಿದೆ. ಬೇರೆ ಕಡೆಯಿಂದ ಊರಿಗೆ ತೆರಳಿದರೆ ಕ್ವಾರಂಟೈನ್‌ ಮಾಡಲಾಗುತ್ತಿದೆ. ಆದರೆ, ಆರೋಗ್ಯ ಸಚಿವ ಸ್ಥಾನದ ಜವಾಬ್ದಾರಿ ಮರೆತು ಶ್ರೀರಾಮುಲು ತಮ್ಮದೇ ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿದ್ದಾರೆ. ಒಬ್ಬರಿಗೊಂದು ಮತ್ತೊಬ್ಬರಿಗೊಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ