ಕರ್ನಾಟಕದಲ್ಲಿ ಕೊರೊನಾ ಸೋಂಕಿನಬ್ಬರ ಇಳಿಕೆ: ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,17,297ಕ್ಕೆ ಏರಿಕೆ ಕಂಡಿದೆ. ಚಿಕಿತ್ಸೆ ಫಲಿಸದೇ ಸೋಮವಾರ ಕೂಡಾ 14 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,445ಕ್ಕೆ ಏರಿಕೆಯಾಗಿದೆ.
Vijaya Karnataka Web 17 Jan 2022, 8:46 pm
ಹೈಲೈಟ್ಸ್:
- ರಾಜ್ಯಾದ್ಯಂತ ಕೊರೊನಾ ಪಾಸಿಟಿವಿಟಿ ಪ್ರಮಾಣ ಕೂಡಾ ಗಣನೀಯ ಕುಸಿತ
- ಶೇ. 12.45ಕ್ಕೆ ಇಳಿಕೆಯಾಯ್ತು ಕೊರೊನಾ ಪಾಸಿಟಿವಿಟಿ ಪ್ರಮಾಣ
- ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆ
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಸೋಮವಾರ 27,156 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಆರ್ಭಟ ತಗ್ಗುವ ಲಕ್ಷಣಗಳು ಗೋಚರಿಸುತ್ತಿದೆ. ರಾಜ್ಯಾದ್ಯಂತ ಕೊರೊನಾ ಪಾಸಿಟಿವಿಟಿ ಪ್ರಮಾಣ ಕೂಡಾ ಗಣನೀಯ ಕುಸಿತ ಕಂಡಿದ್ದು, ಶೇ. 12.45ಕ್ಕೆ ಇಳಿಕೆಯಾಗಿದೆ. ಇನ್ನೊಂದೆಡೆ, ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 32,47,243ಕ್ಕೆ ಏರಿಕೆ ಕಂಡಿದ್ದು, ಸೋಮವಾರ ಕೂಡಾ 7,827 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 29,91,472ಕ್ಕೆ ಏರಿಕೆ ಕಂಡಿದೆ.
ಸದ್ಯ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,17,297ಕ್ಕೆ ಏರಿಕೆ ಕಂಡಿದೆ. ಚಿಕಿತ್ಸೆ ಫಲಿಸದೇ ಸೋಮವಾರ ಕೂಡಾ 14 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,445ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಲೆಕ್ಕಾಚಾರ: ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿ ಇದ್ದು, ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 15,947 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ, ಬಾಗಲಕೋಟೆ 82, ಬಳ್ಳಾರಿ 560, ಬೆಳಗಾವಿ 294, ಬೆಂಗಳೂರು ಗ್ರಾಮಾಂತರ 538, ಬೀದರ್ 75, ಚಾಮರಾಜ ನಗರ 101, ಚಿಕ್ಕಬಳ್ಳಾಪುರ 209, ಚಿಕ್ಕಮಗಳೂರು 236, ಚಿತ್ರದುರ್ಗ 178, ದಕ್ಷಿಣ ಕನ್ನಡ 490, ದಾವಣಗೆರೆ 121, ಧಾರವಾಡ 784, ಗದಗ 71, ಹಾಸನ 1,050, ಹಾವೇರಿ 27, ಕಲಬುರಗಿ 479, ಕೊಡಗು 137, ಕೋಲಾರ 463, ಕೊಪ್ಪಳ 89, ಮಂಡ್ಯ 917, ಮೈಸೂರು 1,770, ರಾಯಚೂರು 140, ರಾಮನಗರ 96, ಶಿವಮೊಗ್ಗ 364, ತುಮಕೂರು 1,147, ಉಡುಪಿ 442, ಉತ್ತರ ಕನ್ನಡ 203, ವಿಜಯಪುರ 128 ಹಾಗೂ ಯಾದಗಿರಿಯಲ್ಲಿ 18 ಪ್ರಕರಣಗಳು ಸೋಮವಾರ ದೃಢಪಟ್ಟಿವೆ.
ರಾಜ್ಯದಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 32,47,243ಕ್ಕೆ ಏರಿಕೆ ಕಂಡಿದ್ದು, ಸೋಮವಾರ ಕೂಡಾ 7,827 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 29,91,472ಕ್ಕೆ ಏರಿಕೆ ಕಂಡಿದೆ.
ಸದ್ಯ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,17,297ಕ್ಕೆ ಏರಿಕೆ ಕಂಡಿದೆ. ಚಿಕಿತ್ಸೆ ಫಲಿಸದೇ ಸೋಮವಾರ ಕೂಡಾ 14 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,445ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಲೆಕ್ಕಾಚಾರ: ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿ ಇದ್ದು, ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 15,947 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ, ಬಾಗಲಕೋಟೆ 82, ಬಳ್ಳಾರಿ 560, ಬೆಳಗಾವಿ 294, ಬೆಂಗಳೂರು ಗ್ರಾಮಾಂತರ 538, ಬೀದರ್ 75, ಚಾಮರಾಜ ನಗರ 101, ಚಿಕ್ಕಬಳ್ಳಾಪುರ 209, ಚಿಕ್ಕಮಗಳೂರು 236, ಚಿತ್ರದುರ್ಗ 178, ದಕ್ಷಿಣ ಕನ್ನಡ 490, ದಾವಣಗೆರೆ 121, ಧಾರವಾಡ 784, ಗದಗ 71, ಹಾಸನ 1,050, ಹಾವೇರಿ 27, ಕಲಬುರಗಿ 479, ಕೊಡಗು 137, ಕೋಲಾರ 463, ಕೊಪ್ಪಳ 89, ಮಂಡ್ಯ 917, ಮೈಸೂರು 1,770, ರಾಯಚೂರು 140, ರಾಮನಗರ 96, ಶಿವಮೊಗ್ಗ 364, ತುಮಕೂರು 1,147, ಉಡುಪಿ 442, ಉತ್ತರ ಕನ್ನಡ 203, ವಿಜಯಪುರ 128 ಹಾಗೂ ಯಾದಗಿರಿಯಲ್ಲಿ 18 ಪ್ರಕರಣಗಳು ಸೋಮವಾರ ದೃಢಪಟ್ಟಿವೆ.