ಆ್ಯಪ್ನಗರ

ರಾಜ್ಯದಲ್ಲಿ ಕಠಿಣ ಲಾಕ್‌ಡೌನ್‌ ಜಾರಿ, ಬುಧವಾರ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಮೇ 3ರ ಬಳಿಕ ರಾಜ್ಯದಲ್ಲಿ ಎಂದಿನಂತೆ ಜನಜೀವನ ಸಹಜವಾಗಿ ನಡೆಯಬೇಕಿದ್ದರೆ, ಈ ಅವಧಿಯಲ್ಲಿ ಜನರು ಯಾವ ರೀತಿ ವರ್ತಿಸುತ್ತಾರೆ ಎಂಬುದು ಮುಖ್ಯ ಎಂಬುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Vijaya Karnataka 14 Apr 2020, 9:31 pm

ಬೆಂಗಳೂರು: ಕೇಂದ್ರ ಸರಕಾರ ಸಿದ್ಧಪಡಿಸಿ ಕಳುಹಿಸುವ ಮಾರ್ಗಸೂಚಿ ಆಧರಿಸಿ ಮುಂಬರುವ ದಿನಗಳಲ್ಲಿ ಇನ್ನಷ್ಟು ಬಿಗಿಯಾಗಿ ಲಾಕ್‌ಡೌನ್‌ ಜಾರಿಗೆ ರಾಜ್ಯ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ಮಹತ್ವದ ಸಭೆ ನಡೆಯಲಿದೆ.
Vijaya Karnataka Web BS Yediyurappa

ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ ಈ ವಿಚಾರ ತಿಳಿಸಿದ್ದಾರೆ.

"ಮೇ 3ರ ಬಳಿಕ ರಾಜ್ಯದಲ್ಲಿ ಎಂದಿನಂತೆ ಜನಜೀವನ ಸಹಜವಾಗಿ ನಡೆಯಬೇಕಿದ್ದರೆ, ಈ ಅವಧಿಯಲ್ಲಿ ಜನರು ಯಾವ ರೀತಿ ವರ್ತಿಸುತ್ತಾರೆ ಎಂಬುದು ಮುಖ್ಯ. ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೆಂಬ ಉದ್ದೇಶವನ್ನು ನಾವೂ ಹೊಂದಿದ್ದೆವು. ಆದರೆ ಪ್ರಧಾನಿ ಸೂಚನೆಗಾಗಿ ಕಾಯುತ್ತಿದ್ದೆವು. ಹಾಟ್‌ಸ್ಪಾಟ್‌ಗಳಲ್ಲಿ ಇನ್ನು ಮುಂದೆ ಮತ್ತಷ್ಟು ಬಿಗಿ ಕ್ರಮ ಜಾರಿಯಾಗುತ್ತದೆ,’’ ಎಂದು ಹೇಳಿದರು.

‘‘ರಾಜ್ಯದಲ್ಲಿ ಇದುವರೆಗೆ 57,633 ವಾಹನ ಸೀಜ್‌ ಮಾಡಲಾಗಿದೆ. 4,169 ಜನರನ್ನು ಬಂಧಿಸಲಾಗಿದೆ. 2,171 ಎಫ್‌ಐಆರ್‌ ದಾಖಲಾಗಿದ್ದು, 95 ಲಕ್ಷ ರೂ. ದಂಡ ವಸೂಲಿ ಮಾಡಿದ್ದೇವೆ," ಎಂದು ಹೇಳಿದರು.

ಸೋಂಕು ಹೆಚ್ಚುತ್ತಿರುವ ಜಿಲ್ಲೆಗೆ ಎಡಿಜಿಪಿಗಳ ನೇಮಕ, ಲಾಕ್‌ಡೌನ್‌ ಉಲ್ಲಂಘಿಸಿದರೆ ಕಾನೂನು ಕ್ರಮ

ಮದ್ಯ ಅನುಮಾನ

"ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆಯೇ? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಅವರು, ಮಾರ್ಗಸೂಚಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು," ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ