ಆ್ಯಪ್ನಗರ

ಮುಂದಿನ ಸವಾಲು ಎದುರಿಸಲು ರಾಜ್ಯ ಸಿದ್ಧ, ವಿಡಿಯೋ ಸಂವಾದದಲ್ಲಿ ಸುಧಾಕರ್‌

"ಕೇಂದ್ರ ನೀಡಿರುವ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಮುಂದಿನ ಸವಾಲುಗಳನ್ನು ನಿಭಾಯಿಸಲು ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಬೇಕಿರುವ ಕ್ರಮಗಳನ್ನು ನಿರ್ಧರಿಸಲಾಗಿದೆ," ಎಂದು ಸುಧಾಕರ್‌ ಹೇಳಿದ್ದಾರೆ.

Vijaya Karnataka 8 May 2020, 8:06 pm

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರಕಾರ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷ ಣ ಸಚಿವ ಡಾ. ಕೆ ಸುಧಾಕರ್‌ ಹೇಳಿದ್ದಾರೆ.
Vijaya Karnataka Web K Sudhakar


"ವಿದೇಶದಿಂದ ಆಗಮಿಸುವ 6500 ಪ್ರಯಾಣಿಕರನ್ನು ಬರಮಾಡಿಕೊಂಡು ಕೇಂದ್ರದ ಮಾರ್ಗಸೂಚಿ ಅನ್ವಯ ತಪಾಸಣೆ ಮತ್ತು ಕ್ವಾರಂಟೈನ್‌ಗೆ ಒಳಪಡಿಸಲಾಗುವುದು," ಎಂದು ಅವರು ವಿವರಿಸಿದರು. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್‌ ಕುಮಾರ್‌ ಚೌಬೆ ಜತೆ ನಡೆಸಿದ ವಿಡಿಯೋ ಸಂವಾದದಲ್ಲಿ ಸುಧಾಕರ್‌ ಪಾಲ್ಗೊಂಡಿದ್ದರು.

"ಕೇಂದ್ರ ನೀಡಿರುವ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಮುಂದಿನ ಸವಾಲುಗಳನ್ನು ನಿಭಾಯಿಸಲು ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಬೇಕಿರುವ ಕ್ರಮಗಳನ್ನು ನಿರ್ಧರಿಸಲಾಗಿದೆ," ಎಂದು ಅವರು ಮಾಹಿತಿ ನೀಡಿದರು.

ರಾಜ್ಯದ 3 ಜಿಲ್ಲೆಗಳಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 48 ಕೇಸ್‌; ಕಿತ್ತಳೆ ಝೋನ್‌ಗೆ ಚಿತ್ರದುರ್ಗ

"ರಾಜ್ಯದಲ್ಲಿ 4ಟಿ ಸೂತ್ರ ಯಶಸ್ವಿಯಾಗಿದೆ. ಆದರೆ ಮರಣ ಪ್ರಮಾಣ ಕಡಿಮೆಗೊಳಿಸುವ ಯತ್ನಗಳ ನಡುವೆಯೂ 31 ಮಂದಿ ಸಾವನ್ನಪ್ಪಿರುವುದು ದುರದೃಷ್ಟಕರ. ಟೆಲಿ ಮೆಡಿಸಿನ್‌ ಮತ್ತು ಟೆಲಿ ಐಸಿಯು ನಂತಹ ಪರಿಣಾಮಕಾರಿ ಕ್ರಮಗಳ ಮೂಲಕ ಕರ್ನಾಟಕದಲ್ಲಿ ಉನ್ನತ ಗುಣಮಟ್ಟದ ಚಿಕಿತ್ಸೆ ಒದಗಿಸಲಾಗುತ್ತಿದೆ. ಎರಡಿದ್ದ ಲ್ಯಾಬ್‌ 32ಕ್ಕೇರಿದೆ. ನಿತ್ಯ 300 ಟೆಸ್ವ್‌ಗಳ ಸಂಖ್ಯೆಯನ್ನು ಈಗ 5500ರಷ್ಟು ಮಾಡಲಾಗುತ್ತಿದೆ," ಎಂದರು.

"ಬೆಂಗಳೂರಿನ ಖಾಸಗಿ ಸಂಸ್ಥೆ ಆವರಣದಲ್ಲಿ ಅಳವಡಿಸಿರುವ ಎರಡು ಟೆಸ್ವ್‌ ಮಿಷನ್‌ ಗಳನ್ನು ನಮ್ಮ ಬಳಕೆಗೆ ಸಿಗುವಂತೆ ಐಸಿಎಂಆರ್‌ ಅಗತ್ಯ ಸೂಚನೆ ನೀಡಿದರೆ ದಿನವೊಂದಕ್ಕೆ ಹೆಚ್ಚುವರಿಯಾಗಿ 6,500 ಟೆಸ್ಟ್‌ ಮಾಡಲು ಅವಕಾಶವಾಗುತ್ತದೆ," ಎಂದು ಸುಧಾಕರ್‌ ಮನವಿ ಮಾಡಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ