ಆ್ಯಪ್ನಗರ

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಶೇ. 42.81ಕ್ಕೆ ಏರಿಕೆ

ಪ್ರತಿ ದಿನ ಗುಣಮುಖರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಂಗಳೂರು ನಗರದಲ್ಲಿಈ ಪ್ರಮಾಣ ಶೇ.9.17ರಷ್ಟು ಏರಿಕೆ ಕಂಡಿದೆ. ಭಾನುವಾರ (ಆ.2) ಸಂಜೆಯ ವೇಳೆಗೆ ರಾಜ್ಯದ ಚೇತರಿಕೆ ಪ್ರಮಾಣ ಶೇ.42.81 ಮತ್ತು ಬೆಂಗಳೂರಿನಲ್ಲಿಶೇ.35.14ರಷ್ಟಿತ್ತು

Vijaya Karnataka Web 3 Aug 2020, 10:07 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣ ಒಂದು ವಾರದಲ್ಲಿ ಶೇ.5.67ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.
Vijaya Karnataka Web ಕೊರೊನಾ
ಕೊರೊನಾ


'ಪ್ರತಿ ದಿನ ಗುಣಮುಖರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಂಗಳೂರು ನಗರದಲ್ಲಿ ಈ ಪ್ರಮಾಣ ಶೇ.9.17 ರಷ್ಟು ಏರಿಕೆ ಕಂಡಿದೆ. ಭಾನುವಾರ (ಆ.2) ಸಂಜೆಯ ವೇಳೆಗೆ ರಾಜ್ಯದ ಚೇತರಿಕೆ ಪ್ರಮಾಣ ಶೇ. 42.81 ಮತ್ತು ಬೆಂಗಳೂರಿನಲ್ಲಿಶೇ.35.14ರಷ್ಟಿತ್ತು' ಎಂದು ತಿಳಿಸಿದ್ದಾರೆ.

ಮಹಿಳೆಗೆ ಸಚಿವರ ಸ್ಪಂದನೆ


ಮಡಿವಾಳದ ಸೇಂಟ್‌ ಜಾನ್ಸ್‌ ಖಾಸಗಿ ಆಸ್ಪತ್ರೆಯಲ್ಲಿ ಶುಲ್ಕ ಕಟ್ಟಿ ತಂದೆಯ ಮೃತದೇಹ ಪಡೆಯಲು ಸಾಧ್ಯವಾಗದೆ ಕಣ್ಣೀರಿಡುತ್ತಿದ್ದ ಮಹಿಳೆಗೆ ಸಚಿವ ಡಾ.ಕೆ.ಸುಧಾಕರ್‌ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

'ಹಣಕ್ಕಿಂತ ಮಾನವೀಯತೆ ದೊಡ್ಡದು. ಹಣ ಪಾವತಿಸಿಲ್ಲ ಅಂದ್ರೆ ಮೃತದೇಹ ಕೊಡಲ್ಲ ಎನ್ನುತ್ತಿರುವ ಮಡಿವಾಳದ ಸೇಂಟ್‌ ಜಾನ್ಸ್‌ ಆಸ್ಪತ್ರೆಯ ವರ್ತನೆ ಅಮಾನವೀಯವಾಗಿದೆ. ತಂದೆಯ ಮೃತದೇಹಕ್ಕಾಗಿ ಮಗಳು ಕಣ್ಣೀರಿಡುತ್ತಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದು, ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ