ಆ್ಯಪ್ನಗರ

ಶಬರಿಮಲೆ ಮಂಡಲ ಮಕರವಿಳಕ್ಕು ಕಾರ್ಯಕ್ರಮ: ಭಕ್ತರಿಗೆ ಕೋವಿಡ್ ಮಾರ್ಗಸೂಚಿ ಕಡ್ಡಾಯ!

ಶಬರಿಮಲೆಯಲ್ಲಿ ಜರುಗುವ ಮಂಡಲ- ಮಕರವಿಳಕ್ಕು ಪರ್ವದ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಕೋವಿಡ್‌-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ.​​ ಪ್ರಥಮವಾಗಿ ಪ್ರತಿದಿನ ಒಂದು ಸಾವಿರ ಯಾತ್ರಾರ್ಥಿಗಳಿಗೆ ಮತ್ತು ವಾರಾಂತ್ಯದಲ್ಲಿ ಪ್ರತಿದಿನ ಎರಡು ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇರುತ್ತದೆ

Vijaya Karnataka Web 15 Dec 2020, 7:24 am
ಬೆಂಗಳೂರು: ಕೇರಳ ರಾಜ್ಯದ ಶಬರಿಮಲೆಯಲ್ಲಿ ಈ ವರ್ಷ ಜರುಗುವ ಮಂಡಲ- ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೂ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.
Vijaya Karnataka Web ಶಬರಿಮಲೆ


ಕರ್ನಾಟಕದಿಂದ ತೆರಳುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್‌-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ ವೆಬ್‌ಸೈಟ್‌ನ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿಮಲೆ ದರ್ಶನಕ್ಕೆ ಅವಕಾಶ ಇರಲಿದೆ.

ಪ್ರಥಮವಾಗಿ ಪ್ರತಿದಿನ ಒಂದು ಸಾವಿರ ಯಾತ್ರಾರ್ಥಿಗಳಿಗೆ ಮತ್ತು ವಾರಾಂತ್ಯದಲ್ಲಿ ಪ್ರತಿದಿನ ಎರಡು ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇರುತ್ತದೆ. ಅದರಂತೆ ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲು ಆದ್ಯತೆ ಇರುತ್ತದೆ. ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್‌-19 ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ.

ಪ್ರವೇಶ ಸ್ಥಳದಲ್ಲಿಆಂಟಿಜೆನ್‌ ಟೆಸ್ಟ್‌ಗೆ ಅವಕಾಶ ಕಲ್ಪಿಸಲಾಗಿದ್ದು, ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕಾಗುತ್ತದೆ. 10 ವರ್ಷಗಳ ಒಳಪಟ್ಟು ಮತ್ತು 60-65 ವರ್ಷಗಳಿಗೆ ಮೇಲ್ಪಟ್ಟವರಿಗೆ ಹಾಗೂ ಕಾಯಿಲೆಯ ಲಕ್ಷಣ ಇರುವವರಿಗೆ ಯಾತ್ರೆ ಕೈಗೊಳ್ಳಲು ಅನುಮತಿ ಇರುವುದಿಲ್ಲ.
ಶಬರಿಮಲೆಯಲ್ಲಿ ಕಾರ್ತಿಕ ಪೌರ್ಣಮಿ ಸಡಗರ: ಅಯ್ಯಪ್ಪನ ಸನ್ನಿಧಿಯಲ್ಲಿ ದೀಪಗಳ ಜಾತ್ರೆ..!

ಬಿಪಿಎಲ್‌ ಕಾರ್ಡ್‌, ಆಯುಷ್ಮಾನ್‌ ಕಾರ್ಡ್‌ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ತಮ್ಮ ಜತೆ ಇಟ್ಟುಕೊಂಡಿರಬೇಕು. ತುಪ್ಪದ ಅಭಿಷೇಕ, ಪಂಪಾನದಿ ಸ್ನಾನ, ಸನ್ನಿಧಾನದಲ್ಲಿ ರಾತ್ರಿ ತಂಗಬೇಕು ಹಾಗೂ ಪಂಪಾ ಮತ್ತು ಗಣಪತಿ ಕೋವಿಲ್‌ಗೆ ಅವಕಾಶವಿರುವುದಿಲ್ಲ. ಯಾತ್ರಾರ್ಥಿಗಳ ಪ್ರಯಾಣಕ್ಕೆ ಎರುಮೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಅವಕಾಶ ಇರುತ್ತದೆ ಎಂದು ಹಿಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ