ಬೆಂಗಳೂರು: ಕೋವಿಡ್ ಲಾಕ್ಡೌನ್ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಆದಾಯ ಗಳಿಗೆಕೆ ಭಾರೀ ಹೊಡೆತ ನೀಡಿದ್ದು, ಸುಮಾರು 756 ಕೋಟಿ ನಷ್ಟ ಉಂಟುಮಾಡಿದೆ. ನೌಕರರ ಮುಷ್ಕರದ ಬೆನ್ನಲ್ಲೇ ಕೊರೊನಾ ನಿಯಂತ್ರಣಕ್ಕೆ ಜಾರಿಗೊಂಡಿರುವ ಲಾಕ್ಡೌನ್ನಿಂದಾಗಿ ನೌಕರರಿಗೆ ವೇತನ ನೀಡಲು ನಿಗಮಗಳು ಪರದಾಟ ನಡೆಸುವ ಸ್ಥಿತಿ ನಿರ್ಮಾನವಾಗಿದೆ. ಏಪ್ರಿಲ್ 28 ರಿಂದ ಸಿಕ್ಕ ಅಂಕಿ ಅಂಶಗಳ ಪ್ರಕಾರ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ರಸ್ತೆ ಸಾರಿಗೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಕೋಟ್ಯಂತರ ರೂಪಾಯಿ ನಷ್ಟವನ್ನು ಅನುಭವಿಸಿದೆ. ಬಿಎಂಟಿಸಿ ಸಂಸ್ಥೆಯಲ್ಲಿ ಪ್ರತಿದಿನ ಸರಾಸರಿ 2.5 ಕೋಟಿ ಆದಾಯ ಸಂಗ್ರಹವಾಗುತ್ತಿತ್ತು. ಆದರೆ ಲಾಕ್ಡೌನ್ನಿಂದಾಗಿ ಸಂಚಾರ ಸ್ಥಗಿತಗೊಂಡ ಪರಿಣಾಮ ಈವರೆಗೆ ಒಟ್ಟು 105 ಕೋಟಿ ರೂಪಾಯಿ ನಷ್ಟ ಉಂಟಾಗಿದೆ.
ಲಾಕ್ಡೌನ್ ಸಂಕಷ್ಟ: ಸರ್ಕಾರವೇ ರೈತರ ಬೆಳೆಗಳನ್ನು ಖರೀದಿ ಮಾಡಬೇಕು, ಡಿಕೆಶಿ ಆಗ್ರಹ
ಇನ್ನು ಕೆಎಸ್ಆರ್ಟಿಸಿ ನಿಗಮಕ್ಕೆ ಲಾಕ್ಡೌನ್ನಿಂದಾಗಿ ಪ್ರತಿದಿನ ಏಳು ಕೋಟಿ ರೂ ನಷ್ಟ ಉಂಟಾಗುತ್ತಿದೆ. ಏಪ್ರಿಲ್ 28 ರಿಂದ ಈ ವರೆಗೆ ಒಟ್ಟು 280 ಕೋಟಿ ನಷ್ಟ ಉಂಟಾಗಿದೆ. ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಏಪ್ರಿಲ್ ತಿಂಗಳಲ್ಲಿ 30 ಕೋಟಿ ನಷ್ಟ ಉಂಟಾದರೆ, ಮೇ ತಿಂಗಳಲ್ಲಿ 162.40 ಕೋಟಿ ನಷ್ಟ ಉಂಟಾಗಿದೆ. ಏಪ್ರಿಲ್ ತಿಂಗಳಲ್ಲಿ ಶೇ. 63 ರಷ್ಟು ನೌಕರರಿಗೆ ವೇತನ ಪಾವತಿ ಮಾಡಲಾಗಿದೆ. ಆದರೆ ಮೇ ತಿಂಗಳ ವೇತನ ಇನ್ನೂ ಪಾವತಿ ಆಗಿಲ್ಲ. ಇನ್ನು ಈಶಾನ್ಯ ರಸ್ತೆ ಸಾರಿಗೆ ನಿಗಮ 209.22 ಕೋಟಿ ನಷ್ಟ ಉಂಟಾಗಿದೆ. ಏಪ್ರಿಲ್ ತಿಂಗಳಲ್ಲಿ ನಿಗಮದ ಶೇ. 70 ರಷ್ಟು ನೌಕರರಿಗೆ ವೇತನ ಪಾವತಿ ಮಾಡಲಾಗಿದೆ. ಆದರೆ ಮೇ ತಿಂಗಳ ವೇತನ ಇನ್ನೂ ಪಾವತಿ ಆಗಿಲ್ಲ.
ಕಳೆದ ಬಾರಿಯ ರಾಷ್ಟ್ರೀಯ ಲಾಕ್ಡೌನ್ನಿಂದಾಗಿಯೂ ಸಾರಿಗೆ ನಿಗಮಗಳು ಸಂಪೂರ್ಣ ಸ್ಥಗಿತಗೊಂಡು ಆರ್ಥಿಕ ಸಂಕಷ್ಟದಲ್ಲಿದ್ದವು. ನೌಕರರಿಗೆ ವೇತನ ನೀಡಲು ಸಾಧ್ಯವಾಗಿರಲಿಲ್ಲ. ಈ ನಡುವೆ ಸಾರಿಗೆ ನೌಕರರ ಮುಷ್ಕರದಿಂದಲೂ ನಿಗಮಗಳು ಭಾರೀ ನಷ್ಟವನ್ನು ಅನುಭವಿಸಿದ್ದವು. ಇದರ ಬೆನ್ನಲ್ಲೇ ಲಾಕ್ಡೌನ್ ಜಾರಿಗೊಂಡ ಪರಿಣಾಮ ಪರಿಸ್ಥಿತಿ ಶೋಚನೀಯವಾಗಿದೆ.
ಸದ್ಯ ಜೂನ್ 14 ರ ವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಲ್ಲಿರಲಿದೆ. ಇದಾದ ಬಳಿಕ ಹಂತ ಹಂತವಾಗಿ ಲಾಕ್ಡೌನ್ ತೆರವು ಆರಂಭವಾಗಲಿದೆ. ಸಾರಿಗೆ ಇಲಾಖೆಯ ನಿಗಮಗಳ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ತಯಾರಾಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಪ್ರಯಾಣಿಕರ ಹಾಗೂ ನೌಕರರ ಸುರಕ್ಷತೆಯ ದೃಷ್ಟಿಯಿಂದ ಎರಡು ಡೋಸ್ ಲಸಿಕೆ ಪಡೆದ ನೌಕರರನ್ನೇ ಆರಂಭಿಕ ಹಂತದಲ್ಲಿ ಬಳಕೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದೆ.
ಲಾಕ್ಡೌನ್ ತೆರವಿನ ಬಳಿಕ ಬಸ್ ಪ್ರಯಾಣ ದರ ಏರಿಕೆ ಆಗುತ್ತಾ?
ನಿಗಮಗಳಿಗೆ ಆದ ನಷ್ಟ ಸರಿದೂಗಿಸಲು ಪ್ರಯಾಣ ದರ ಏರಿಕೆ ಮಾಡಲಾಗುತ್ತಾ ಎಂಬ ಪ್ರಶ್ನೆಯೂ ಇದೀಗ ಉದ್ಭವಿಸಿದೆ. ಆದರೆ ಇದನ್ನು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ. ಬಿಎಂಟಿಸಿ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗುತ್ತದೆ ಎಂಬ ಮಾತು ಸತ್ಯಕ್ಕೆ ದೂರವಾಗಿದೆ. ಲಾಕ್ಡೌನ್ ಸಂಕಷ್ಟದ ಅವಧಿಯಲ್ಲಿ ಪ್ರಯಾಣಿಕರ ಮೇಲೆ ಟಿಕೆಟ್ ದರ ಹೆಚ್ಚಳದ ಬರೆಯನ್ನು ಸದ್ಯಕ್ಕೆ ಹಾಕುವುದಿಲ್ಲ, ಮುಂದೆ ನೋಡೋಣ ಎಂದಿದ್ದಾರೆ.
ಲಾಕ್ಡೌನ್ ಸಂಕಷ್ಟ: ಸರ್ಕಾರವೇ ರೈತರ ಬೆಳೆಗಳನ್ನು ಖರೀದಿ ಮಾಡಬೇಕು, ಡಿಕೆಶಿ ಆಗ್ರಹ
ಇನ್ನು ಕೆಎಸ್ಆರ್ಟಿಸಿ ನಿಗಮಕ್ಕೆ ಲಾಕ್ಡೌನ್ನಿಂದಾಗಿ ಪ್ರತಿದಿನ ಏಳು ಕೋಟಿ ರೂ ನಷ್ಟ ಉಂಟಾಗುತ್ತಿದೆ. ಏಪ್ರಿಲ್ 28 ರಿಂದ ಈ ವರೆಗೆ ಒಟ್ಟು 280 ಕೋಟಿ ನಷ್ಟ ಉಂಟಾಗಿದೆ. ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಏಪ್ರಿಲ್ ತಿಂಗಳಲ್ಲಿ 30 ಕೋಟಿ ನಷ್ಟ ಉಂಟಾದರೆ, ಮೇ ತಿಂಗಳಲ್ಲಿ 162.40 ಕೋಟಿ ನಷ್ಟ ಉಂಟಾಗಿದೆ. ಏಪ್ರಿಲ್ ತಿಂಗಳಲ್ಲಿ ಶೇ. 63 ರಷ್ಟು ನೌಕರರಿಗೆ ವೇತನ ಪಾವತಿ ಮಾಡಲಾಗಿದೆ. ಆದರೆ ಮೇ ತಿಂಗಳ ವೇತನ ಇನ್ನೂ ಪಾವತಿ ಆಗಿಲ್ಲ. ಇನ್ನು ಈಶಾನ್ಯ ರಸ್ತೆ ಸಾರಿಗೆ ನಿಗಮ 209.22 ಕೋಟಿ ನಷ್ಟ ಉಂಟಾಗಿದೆ. ಏಪ್ರಿಲ್ ತಿಂಗಳಲ್ಲಿ ನಿಗಮದ ಶೇ. 70 ರಷ್ಟು ನೌಕರರಿಗೆ ವೇತನ ಪಾವತಿ ಮಾಡಲಾಗಿದೆ. ಆದರೆ ಮೇ ತಿಂಗಳ ವೇತನ ಇನ್ನೂ ಪಾವತಿ ಆಗಿಲ್ಲ.
ಕಳೆದ ಬಾರಿಯ ರಾಷ್ಟ್ರೀಯ ಲಾಕ್ಡೌನ್ನಿಂದಾಗಿಯೂ ಸಾರಿಗೆ ನಿಗಮಗಳು ಸಂಪೂರ್ಣ ಸ್ಥಗಿತಗೊಂಡು ಆರ್ಥಿಕ ಸಂಕಷ್ಟದಲ್ಲಿದ್ದವು. ನೌಕರರಿಗೆ ವೇತನ ನೀಡಲು ಸಾಧ್ಯವಾಗಿರಲಿಲ್ಲ. ಈ ನಡುವೆ ಸಾರಿಗೆ ನೌಕರರ ಮುಷ್ಕರದಿಂದಲೂ ನಿಗಮಗಳು ಭಾರೀ ನಷ್ಟವನ್ನು ಅನುಭವಿಸಿದ್ದವು. ಇದರ ಬೆನ್ನಲ್ಲೇ ಲಾಕ್ಡೌನ್ ಜಾರಿಗೊಂಡ ಪರಿಣಾಮ ಪರಿಸ್ಥಿತಿ ಶೋಚನೀಯವಾಗಿದೆ.
ಸದ್ಯ ಜೂನ್ 14 ರ ವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಲ್ಲಿರಲಿದೆ. ಇದಾದ ಬಳಿಕ ಹಂತ ಹಂತವಾಗಿ ಲಾಕ್ಡೌನ್ ತೆರವು ಆರಂಭವಾಗಲಿದೆ. ಸಾರಿಗೆ ಇಲಾಖೆಯ ನಿಗಮಗಳ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ತಯಾರಾಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಪ್ರಯಾಣಿಕರ ಹಾಗೂ ನೌಕರರ ಸುರಕ್ಷತೆಯ ದೃಷ್ಟಿಯಿಂದ ಎರಡು ಡೋಸ್ ಲಸಿಕೆ ಪಡೆದ ನೌಕರರನ್ನೇ ಆರಂಭಿಕ ಹಂತದಲ್ಲಿ ಬಳಕೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದೆ.
ಲಾಕ್ಡೌನ್ ತೆರವಿನ ಬಳಿಕ ಬಸ್ ಪ್ರಯಾಣ ದರ ಏರಿಕೆ ಆಗುತ್ತಾ?
ನಿಗಮಗಳಿಗೆ ಆದ ನಷ್ಟ ಸರಿದೂಗಿಸಲು ಪ್ರಯಾಣ ದರ ಏರಿಕೆ ಮಾಡಲಾಗುತ್ತಾ ಎಂಬ ಪ್ರಶ್ನೆಯೂ ಇದೀಗ ಉದ್ಭವಿಸಿದೆ. ಆದರೆ ಇದನ್ನು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ. ಬಿಎಂಟಿಸಿ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗುತ್ತದೆ ಎಂಬ ಮಾತು ಸತ್ಯಕ್ಕೆ ದೂರವಾಗಿದೆ. ಲಾಕ್ಡೌನ್ ಸಂಕಷ್ಟದ ಅವಧಿಯಲ್ಲಿ ಪ್ರಯಾಣಿಕರ ಮೇಲೆ ಟಿಕೆಟ್ ದರ ಹೆಚ್ಚಳದ ಬರೆಯನ್ನು ಸದ್ಯಕ್ಕೆ ಹಾಕುವುದಿಲ್ಲ, ಮುಂದೆ ನೋಡೋಣ ಎಂದಿದ್ದಾರೆ.