ಬೆಂಗಳೂರು: ಬಕ್ರೀದ್ ಹಬ್ಬದ ದಿನ ಗೋವು ಸೇರಿದಂತೆ ಎಲ್ಲ ಪ್ರಾಣಿಗಳ ಬಲಿ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಬಿಜೆಪಿ ಘಟಕ ಪೊಲೀಸ್ ನಿರ್ದೇಶಕರಿಗೆ ಆಗ್ರಹಿಸಿದೆ.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ಮನವಿ ಪತ್ರ ನೀಡಿರುವ ಬಿಜೆಪಿ ನಿಯೋಗ, ರಾಜ್ಯದಲ್ಲಿ ಎಲ್ಲ ಪ್ರಾಣಿಗಳ ಬಲಿ ನಿಷೇಧ ಕಾಯಿದೆ ಕೇವಲ ಹಿಂದುಗಳಿಗೆ ಮಾತ್ರ ಅನ್ವಯಿಸಲಾಗುತ್ತಿತ್ತು. 1975ರಲ್ಲಿ ಇದನ್ನು ಎಲ್ಲ ಧರ್ಮದವರಿಗೂ ವಿಸ್ತರಿಸಿ ತಿದ್ದುಪಡಿ ಮಾಡಲಾಗಿತ್ತು. ಆದರೆ ಬಕ್ರೀದ್ ಸಂದರ್ಭದಲ್ಲಿ ಕುರ್ಬಾನಿ ನೀಡುವುದಕ್ಕೆ ಪ್ರಾಣಿ ಬಲಿ ಅವ್ಯಾಹತವಾಗಿ ನಡೆದಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಲ್ಲಿದ್ದು, ಗೋ ಕಳ್ಳತನ, ಅಕ್ರಮ ಸಾಗಣಿಕೆ, ಹತ್ಯೆ ತಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದೆ.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ಮನವಿ ಪತ್ರ ನೀಡಿರುವ ಬಿಜೆಪಿ ನಿಯೋಗ, ರಾಜ್ಯದಲ್ಲಿ ಎಲ್ಲ ಪ್ರಾಣಿಗಳ ಬಲಿ ನಿಷೇಧ ಕಾಯಿದೆ ಕೇವಲ ಹಿಂದುಗಳಿಗೆ ಮಾತ್ರ ಅನ್ವಯಿಸಲಾಗುತ್ತಿತ್ತು. 1975ರಲ್ಲಿ ಇದನ್ನು ಎಲ್ಲ ಧರ್ಮದವರಿಗೂ ವಿಸ್ತರಿಸಿ ತಿದ್ದುಪಡಿ ಮಾಡಲಾಗಿತ್ತು. ಆದರೆ ಬಕ್ರೀದ್ ಸಂದರ್ಭದಲ್ಲಿ ಕುರ್ಬಾನಿ ನೀಡುವುದಕ್ಕೆ ಪ್ರಾಣಿ ಬಲಿ ಅವ್ಯಾಹತವಾಗಿ ನಡೆದಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಲ್ಲಿದ್ದು, ಗೋ ಕಳ್ಳತನ, ಅಕ್ರಮ ಸಾಗಣಿಕೆ, ಹತ್ಯೆ ತಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದೆ.