ಆ್ಯಪ್ನಗರ

ಗೋಹತ್ಯೆ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಯತ್ನಾಳ್‌ ಒತ್ತಾಯ

ಸುಗ್ರೀವಾಜ್ಞೆ ಹೊರಡಿಸಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೊಳಿಸುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

Vijaya Karnataka 22 Aug 2019, 5:00 am
ಬೆಂಗಳೂರು: ಸುಗ್ರೀವಾಜ್ಞೆ ಹೊರಡಿಸಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೊಳಿಸುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.
Vijaya Karnataka Web Vijaypura- Basangowda Patil Yatnal-BJP (2)


ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿಯಾದ ಅವರು ಈ ಸಂಬಂಧ ಮನವಿ ಸಲ್ಲಿಸಿ,''ರಾಜ್ಯದಲ್ಲಿ ಗೋವುಗಳ ಕಳ್ಳಸಾಗಣೆ ಮತ್ತು ಹತ್ಯೆ ನಡೆಯುತ್ತಿದೆ. ಗೋರಕ್ಷಕರನ್ನು ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು ಮತ್ತು ಅಕ್ರಮವಾಗಿ ಕಸಾಯಿಖಾನೆ ವಿರುದ್ಧ ಕ್ರಮ ಕೈಗೊಳ್ಳಬೇಕು,'' ಎಂದು ಆಗ್ರಹಿಸಿದ್ದಾರೆ.

ಗಣೇಶೋತ್ಸವ ಅನುಮತಿ ಸರಳಗೊಳಿಸಿ

ಗಣೇಶೋತ್ಸವಕ್ಕೆ ಅನುಮತಿ ನೀಡಲು ಬಿಗಿ ನಿಯಮದ ನಿರ್ಬಂಧ ಹೇರಬಾರದು ಎಂದು ಸಿಎಂ ಅವರಿಗೆ ಯತ್ನಾಳ್‌ ಒತ್ತಾಯಿಸಿದ್ದಾರೆ. ''ಗಣೇಶ ಚತುರ್ಥಿ ಆಚರಣೆಗೆ ಸಮಸ್ಯೆಯಾದರೆ ಹೋರಾಟ ನಡೆಸುತ್ತೇವೆ,''ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ