ಮಂಗಳೂರು: ಗೋಹತ್ಯೆ ನಿಷೇಧ ವಿಧೇಯಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗಿದ್ದು, ಬಿಜೆಪಿ ಸರಕಾರ ಗೋ ಸಂರಕ್ಷಣೆಗೆ ದಿಟ್ಟ ಕ್ರಮ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಭಾರಿ ವಿವಾದಕ್ಕೆ ಕಾರಣವಾಗಿದ್ದ ಗೋ ಹತ್ಯೆ ನಿಷೇಧ ಕಾಯ್ದೆ ಕೊನೆಗೂ ಸೋಮವಾರ ವಿಧಾನ ಪರಿಷತ್ನಲ್ಲಿ ಅಂಗೀಕಾರವಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ಕ್ಕೆ ವಿಧಾನಸಭೆಯಲ್ಲೀ ಈಗಾಗಲೇ ಅಂಗೀಕಾರ ದೊರೆತಿದೆ.
ಈಗ ವಿಧಾನ ಪರಿಷತ್ತಿನಲ್ಲೂ ಇದಕ್ಕೆ ಹಸಿರು ನಿಶಾನೆ ಸಿಗುವ ಮೂಲಕ ಗೋ ಹತ್ಯೆ ನಿಷೇಧ ಈಗ ಕಾನೂನು ಮಾನ್ಯತೆ ಪಡೆದುಕೊಳ್ಳಲಿದೆ.
ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರಗೊಂಡಿದ್ದು, ನಾನು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಬಹುತೇಕರ ಕನಸು ಈಗ ನನಸಾಗಿದೆ. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ. ಮುಖ್ಯಮಂತ್ರಿಗಳ ಪಾತ್ರ ಹೆಚ್ಚಾಗಿದೆ ಇದರಲ್ಲಿ ಹೆಚ್ಚಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ.