ಆ್ಯಪ್ನಗರ

ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿದವರ ವಿರುದ್ಧ ಕ್ರಿಮಿನಲ್‌ ಕೇಸ್‌: ಸಚಿವ ಕೆ.ಗೋಪಾಲಯ್ಯ

ರಾಜ್ಯದ ಕೆಲ ಜಿಲ್ಲೆಗಳಲ್ಲಿಅಕ್ರಮ ದಾಸ್ತಾನು ಪ್ರಕರಣ ವರದಿಯಾಗಿದೆ. ಕಲಬುರಗಿಯಲ್ಲಿಒಂದು ಸಾವಿರ ಕ್ವಿಂಟಾಲ್‌ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು,'' ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

Vijaya Karnataka Web 11 May 2020, 10:11 pm

ಹೈಲೈಟ್ಸ್‌:

  • ಪಡಿತರ ಅಕ್ಕಿ ಮಾರಾಟ ಮಾಡಿದವರ ವಿರುದ್ಧ ಕ್ರಮ: ಕೆ. ಗೋಪಾಲಯ್ಯ
  • ಅಕ್ರಮ ದಾಸ್ತಾನು ಮಾಡಿದವರ ವಿರುದ್ಧ ಕ್ರಿಮಿನಲ್‌ ಕೇಸ್‌: ಸಚಿವರು
  • ಪಡಿತರ ವ್ಯವಸ್ಥೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾದ ಆಹಾರ ಸಚಿವ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ration
ಬೆಂಗಳೂರು: ರಾಜ್ಯದ ನಾನಾ ಜಿಲ್ಲೆಗಳಲ್ಲಿ ಪಡಿತರ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವುದಕ್ಕೆ ಆಹಾರ ಸಚಿವ ಕೆ.ಗೋಪಾಲಯ್ಯ ಸೂಚಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಮಾತನಾಡಿ,''ಕಲಬುರಗಿ, ಮೈಸೂರು, ದಾವಣಗೆರೆ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿಅಕ್ರಮ ದಾಸ್ತಾನು ಪ್ರಕರಣ ವರದಿಯಾಗಿದೆ. ಕಲಬುರಗಿಯಲ್ಲಿಒಂದು ಸಾವಿರ ಕ್ವಿಂಟಾಲ್‌ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು,'' ಎಂದು ಎಚ್ಚರಿಕೆ ನೀಡಿದ್ದಾರೆ.

''ಕಲಬುರಗಿಯಲ್ಲಿ1,500 ಕ್ವಿಂಟಾಲ್‌ ಅಕ್ಕಿ, 150 ಚೀಲ ತೊಗರಿ, ಮೈಸೂರಿನಲ್ಲಿ697 ಕ್ವಿಂಟಾಲ್‌ ಅಕ್ಕಿ, ದಾವಣಗೆರೆಯಲ್ಲಿ400 ಕ್ವಿಂಟಾಲ್‌ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಇದು ಯಾರಿಗೆ ಸಂಬಂಧಪಟ್ಟಿದ್ದು ಎಂಬುದು ಇನ್ನೂ ದೃಢಪಟ್ಟಿಲ್ಲ,'' ಎಂದರು.

ಕೆಎಸ್‌ಆರ್‌ಟಿಸಿ ನೌಕರರ ವೇತನ ನೀಡಲು ಆರ್ಥಿಕ ನೆರವು ನೀಡಿದ ರಾಜ್ಯ ಸರ್ಕಾರ

''ಸಹಾಯಧನ ರೂಪದಲ್ಲಿನೀಡುವ ಅಕ್ಕಿಯನ್ನು ಮಾರುಕಟ್ಟೆಯಲ್ಲಿ10 ರಿಂದ 12 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಂತವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಈ ಅಕ್ಕಿಯನ್ನು ಸರಕಾರ 26 ರೂ. ಕೊಟ್ಟು ಖರೀದಿಸಿ ಪಡಿತರದಾರರಿಗೆ ವಿತರಿಸುತ್ತಿದೆ ಎಂಬುದನ್ನು ಫಲಾನುಭವಿಗಳು ಅರ್ಥ ಮಾಡಿಕೊಳ್ಳಬೇಕು. ಅಕ್ಕಿ ಮಾರಾಟ ತಡೆಯುವುದಕ್ಕಾಗಿ ಪಡಿತರ ವ್ಯವಸ್ಥೆಯಲ್ಲಿಸೂಕ್ತ ಮಾರ್ಪಾಟು ತರುವ ಅಗತ್ಯವಿದೆ,''ಎಂದು ಹೇಳಿದರು.

''ರಾಜ್ಯ ಹಾಗೂ ಕೇಂದ್ರ ಸರಕಾರಗಳು ನೀಡುವ ಅಕ್ಕಿ ಹೆಚ್ಚಾಗಿದ್ದರೆ ಅಂತವರು ಪಡಿತರ ಪಡೆಯಬಾರದು, ಅದೇ ಅಕ್ಕಿ ಬಡವರಿಗೆ ಉಪಯೋಗವಾಗುತ್ತದೆ,'' ಎಂದರು.

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಸುರಿಯಲಿದೆ ಭಾರೀ ಮಳೆ!

''ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆ ಅನ್ವಯ ಏಪ್ರಿಲ್‌ 1ರಿಂದಲೇ ಪಡಿತರ ವಿತರಣೆ ಮಾಡಲಾಗಿದೆ. ಶೇ.72ರಷ್ಟು ವಿತರಣೆ ಕಾರ್ಯ ಪೂರ್ಣಗೊಂಡಿದೆ. ಲೋಪಕ್ಕೆ ಸಂಬಂಧಪಟ್ಟಂತೆ 169 ನ್ಯಾಯಬೆಲೆ ಅಂಗಡಿ ಪರವಾನಗಿ ಈಗಾಗಲೇ ರದ್ದುಗೊಳಿಸಲಾಗಿದೆ. 33 ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 449 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದೆ,'' ಎಂದು ಸಚಿವರು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ