ಆ್ಯಪ್ನಗರ

ಸಿಬಿಐ ಕಸ್ಟಡಿಗೆ ಗೌರಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಗಳಾದ ರಾಜೇಶ್‌ ಬಂಗೇರಾ ಮತ್ತು ಅಮಿತ್‌ ...

Vijaya Karnataka 2 Sep 2018, 5:00 am
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಗಳಾದ ರಾಜೇಶ್‌ ಬಂಗೇರಾ ಮತ್ತು ಅಮಿತ್‌ ದೆಗ್ವೇಕರ್‌ನನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Vijaya Karnataka Web cbi logo


ಶುಕ್ರವಾರ ಎಸಿಎಂಎಂ ನ್ಯಾಯಾಲಯದ ಅನುಮತಿ ಪಡೆದ ಸಿಬಿಐ ಪೊಲೀಸರು, ಸಂಜೆಯೇ ಇಬ್ಬರು ಆರೋಪಿಗಳನ್ನು ಪುಣೆಗೆ ಕರೆದೊಯ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ದಾಬೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಇವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ ನೀಡಿತ್ತು. ಇಬ್ಬರನ್ನು ಮಾತ್ರ ಕರೆದೊಯ್ದ ಅಧಿಕಾರಿಗಳು, ಮತ್ತೊಬ್ಬ ಆರೋಪಿಯನ್ನು ಮುಂದಿನ ವಾರ ಪುಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಗೌರಿ ಮೇಲೆ ಗುಂಡು ಹಾರಿಸಿರುವ ಆರೋಪ ಎದುರಿಸುತ್ತಿರುವ ಪರಶುರಾಮ್‌ ವಾಗ್ಮೋರೆ ಮತ್ತು ದಾಬೋಲ್ಕರ್‌ ಮೇಲೆ ಗುಂಡು ಹಾರಿಸಿದ ಆರೋಪದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧಿತನಾಗಿರುವ ಸಚಿನ್‌ ಅಧುರೆಗೆ ರಾಜೇಶ್‌ ಬಂಗೇರಾ ಗನ್‌ ತರಬೇತಿ ಕೊಟ್ಟಿದ್ದ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ ಸಮಿತಿಯನ್ನು ರಚಿಸಿ ಮೂಢನಂಬಿಕೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಅವರನ್ನು 2013ರ ಆ.20ರಂದು ಪುಣೆಯ ಅವರ ಮನೆಯ ಬಳಿಯೇ ಆರೋಪಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ