ಆ್ಯಪ್ನಗರ

ಬಿಬಿಎಂಪಿ ಬಜೆಟ್‌ಗೆ ಕತ್ತರಿ: ಸಿಎಂ, ಡಿಸಿಎಂ ವಿರುದ್ಧ ಕೈಪಡೆ ಆಕ್ರೋಶ

ಬಿಬಿಎಂಪಿ ಬಜೆಟ್‌ನಲ್ಲಿ ಅಂದಾಜು 3 ಸಾವಿರ ಕೋಟಿ ರೂ...

Vijaya Karnataka 5 May 2019, 5:00 am
ಬೆಂಗಳೂರು: ಬಿಬಿಎಂಪಿ ಬಜೆಟ್‌ನಲ್ಲಿ ಅಂದಾಜು 3 ಸಾವಿರ ಕೋಟಿ ರೂ.ಗಳ ಯೋಜನೆಗಳಿಗೆ ಕತ್ತರಿ ಹಾಕಿರುವುದರಿಂದ ಆಕ್ರೋಶಗೊಂಡಿರುವ ರಾಜಧಾನಿಯ ಕಾಂಗ್ರೆಸ್‌ ಶಾಸಕರು ಸಿಎಂ, ಡಿಸಿಎಂ ವಿರುದ್ಧ ತಿರುಗಿ ಬಿದ್ದಿದ್ದಾರೆ.
Vijaya Karnataka Web bbmp


ಬಜೆಟ್‌ ಗಾತ್ರ ಕಡಿಮೆಯಿಂದಾಗಿ ಕ್ಷೇತ್ರಗಳಿಗೆ ನಿಗದಿಯಾಗಿದ್ದ ಅನುದಾನದ ಜತೆಗೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಜಾರಿಯ ಅನುದಾನವೂ ಕಡಿತಗೊಂಡಿದೆ. ಜತೆಗೆ ತುರ್ತಾಗಿ ಆಗಬೇಕಿದ್ದ ಕಾಮಗಾರಿಗಳಿಗೂ ಹೊಡೆತಬಿದ್ದಿದೆ. ನಮ್ಮದೇ ಸರಕಾರವಿದ್ದು, ನಮ್ಮದೇ ಬಿಬಿಎಂಪಿ ಇದ್ದರೂ ನಮ್ಮ ಕ್ಷೇತ್ರಗಳಲ್ಲಿ ನಾವು ರೂಪಿಸಿದ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಕಾಂಗ್ರೆಸ್‌ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರ ಧೋರಣೆ ಬಗ್ಗೆ ಸಿಡಿಮಿಡಿಗೊಂಡಿದ್ದಾರೆ. ಕ್ಷೇತ್ರಗಳಿಗೆ ಉಪ ಮುಖ್ಯಮಂತ್ರಿಯಿಂದಲೇ ಅನ್ಯಾಯವಾಗುತ್ತಿದೆ. ಇದನ್ನು ಎಷ್ಟು ದಿನ ಸಹಿಸಿಕೊಂಡಿರಬೇಕು. ಬಜೆಟ್‌ ಕಡಿತದ ಮೂಲಕ ಮೂಲಸೌಲಭ್ಯಗಳನ್ನು ವೃದ್ಧಿಸುವ ಯೋಜನೆಗಳನ್ನು ಕಡೆಗಣಿಸಲಾಗಿದೆ ಎಂದು ಹಲವರು ಆಕ್ರೋಶಗೊಂಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಲು ನಿರ್ಧರಿಸಿರುವ ಕಾಂಗ್ರೆಸ್‌ ಶಾಸಕರು ಬೆಂಗಳೂರಿನಿಂದ ಆಯ್ಕೆಯಾಗಿರುವವರಿಗೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡಬೇಕು, ಪರಮೇಶ್ವರ್‌ ತುಮಕೂರು ಜಿಲ್ಲಾ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ ಎರಡು ಕಡೆ ಉಸ್ತುವಾರಿಯಿಂದ ಎಲ್ಲಿಗೂ ನ್ಯಾಯ ಸಿಗುತ್ತಿಲ್ಲ ಎಂದು ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ