ಆ್ಯಪ್ನಗರ

ಕರಾವಳಿ ಮತ್ತು ಮಲೆನಾಡಿನಲ್ಲಿ ಅವಾಂತರ ತಂದಿಟ್ಟ ಕ್ಯಾರ್ ಚಂಡಮಾರುತ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ 'ಕ್ಯಾರ್' ಚಂಡಮಾರುತ ಎದ್ದಿದ್ದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗೆ ಭಾರೀ ಹೊಡೆತ ಬಿದ್ದಿದೆ. ಮೂರು ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

Vijaya Karnataka Web 25 Oct 2019, 2:33 pm
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ 'ಕ್ಯಾರ್' ಚಂಡಮಾರುತ ಎದ್ದಿದ್ದು ದಕ್ಷಿಣ ಕನ್ನಡ , ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ ವಹಿಸಲಾಗಿದೆ. ಇದರ ಜೊತೆಗೆ ಮಹಾರಾಷ್ಟ್ರ ಮತ್ತು ಗೋವಾ ತೀರ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ.
Vijaya Karnataka Web chikkamagaluru


ಮತ್ತೆ ವಾಯುಭಾರ ಕುಸಿತ: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಕ್ಯಾರ್ ಆತಂಕದಲ್ಲಿ ಕರಾವಳಿಗರು:
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕ್ಯಾರ್ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಅವಿಭಜಿತ ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕ್ಯಾರ್ ಚಂಡಮಾರುತ ಗಾಳಿ ಮತ್ತು ಮಳೆಯಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿಷೇಧ ಹೇರಲಾಗಿದೆ. ಉಳ್ಳಾಲದ ಉಚ್ಚಿಲ, ಬಟ್ಟಂಪಾಡಿ, ಸೋಮೇಶ್ವರ ತೀರ ಪ್ರದೇಶದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ. ಹೀಗಾಗಿ ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.

ಭಾರಿ ಮಳೆ, ಕರಾವಳಿಯಲ್ಲಿ ರೆಡ್‌ ಅಲರ್ಟ್‌; ದ.ಕ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಲೆನಾಡಿನಲ್ಲಿ ಅವಾಂತರ ಸೃಷ್ಟಿಸಿದ 'ಕ್ಯಾರ್':
ಮಲೆನಾಡು ಜಿಲ್ಲೆ ಚಿಕ್ಕಮಗಳೂರಿನಲ್ಲಿ ಕ್ಯಾರ್ ಚಂಡಮಾರುತದ ಪರಿಣಾಮ ಬೃಹತ್ ಗಾತ್ರದ ಮರಗಳು ಧರೆಗುಳಿದ್ದು, ಮರದ ಅಡಿ ಸಿಲುಕಿ ಹಸುವೊಂದು ಮೃತಪಟ್ಟಿದೆ. ಇನ್ನೊಂದೆಡೆ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆ ಮತ್ತು ಗಾಳಿಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಈ ವೇಳೆ ತಾರಾ ಎಂಬ ಶಿಕ್ಷಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಂಡಮಾರುತ ಭೀತಿ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಭಾರೀ ಮಳೆಗೆ ಮೂಡಿಗೆರೆ ತಾಲೂಕಿನ ಮಹಲ್ ಗೋಡು ಸೇತುವೆ ಮುಳುಗಡೆಯಾಗಿದ್ದು, ಸುಮಾರು 3 ಅಡಿಯಷ್ಟು ನೀರು ಸೇತುವೆಯನ್ನು ಆವರಿಸಿಕೊಂಡಿದೆ. ಪರಿಣಾಮ ಕಳಸ-ಮಾಗುಂಡಿ-ಕೊಟ್ಟಿಗೆಹಾರ ಸಂಪರ್ಕ ಕಡಿತಗೊಂಡಿದೆ.
ಮೂಡಿಗೆರೆ, ಕೊಪ್ಪ, ಎನ್.ಆರ್. ಪುರ, ಶೃಂಗೇರಿ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಗುರುವಾರ ರಾತ್ರಿ ಇಡೀ ವಿದ್ಯುತ್ ಸಂಪರ್ಕ ಇಲ್ಲದೆ ಜನ ಪರದಾಡಿದರು.

ತಮಿಳುನಾಡು, ಕೇರಳದಲ್ಲಿ ವಾಯುಭಾರ ಕುಸಿತ, ಚಂಡಮಾರುತ, ಕರ್ನಾಟಕದಲ್ಲಿ ಮಳೆ ಸಾಧ್ಯತೆ

ಮಲೆನಾಡಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಭಾರೀ ಮಳೆಯು ಅವಾಂತರ ಸೃಷ್ಟಿಸಿದ್ದರಿಂದ ವಾಹನ ಸವಾರರು ಪರದಾಡಿದರು. ಬಿರುಗಾಳಿ ಸಹಿತ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂದಿದ್ದು, ಕಡೂರಿನಲ್ಲಿ ವೇದಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ