ಆ್ಯಪ್ನಗರ

ಭೂಪರಭಾರೆ ಕಾಯಿದೆ ತಿದ್ದುಪಡಿಗೆ ಆಗ್ರಹ

ದಲಿತರಿಗೆ ಸಂಬಂಧಿಸಿದ ಭೂಮಿಯ ಹಕ್ಕನ್ನು ರಕ್ಷಿಸಲು ಸಾಧ್ಯವಾಗುವಂತೆ ಕರ್ನಾಟಕ ಎಸ್‌ಸಿ, ಎಸ್‌ಟಿ ಭೂ ಪರಭಾರೆ ನಿಷೇಧ ಕಾಯಿದೆಯನ್ನು ತಿದ್ದುಪಡಿ ಮಾಡಬೇಕು ಎಂದು ದಲಿತ ಸಂಘಟನೆಗಳು ಒತ್ತಾಯಿಸಿವೆ.

Vijaya Karnataka 9 Aug 2019, 5:00 am
ಬೆಂಗಳೂರು : ದಲಿತರಿಗೆ ಸಂಬಂಧಿಸಿದ ಭೂಮಿಯ ಹಕ್ಕನ್ನು ರಕ್ಷಿಸಲು ಸಾಧ್ಯವಾಗುವಂತೆ ಕರ್ನಾಟಕ ಎಸ್‌ಸಿ, ಎಸ್‌ಟಿ ಭೂ ಪರಭಾರೆ ನಿಷೇಧ ಕಾಯಿದೆಯನ್ನು ತಿದ್ದುಪಡಿ ಮಾಡಬೇಕು ಎಂದು ದಲಿತ ಸಂಘಟನೆಗಳು ಒತ್ತಾಯಿಸಿವೆ.
Vijaya Karnataka Web dalit associations protest
ಭೂಪರಭಾರೆ ಕಾಯಿದೆ ತಿದ್ದುಪಡಿಗೆ ಆಗ್ರಹ


ದಲಿತ ಸಂಘಟನೆಗಳ ಒಕ್ಕೂಟ ಶಾಸಕರ ಭವನದಲ್ಲಿ ಆಯೋಜಿಸಿದ್ದ ಕಾಯಿದೆ ಕುರಿತ ಚರ್ಚೆಯಲ್ಲಿ ಸಂಘಟನೆಗಳು ಸರಕಾರಕ್ಕೆ ಒತ್ತಾಯಿಸಿದವು. ಲೋಕಾಕ್ಷ ಮಾತನಾಡಿ, ''ಈ ಕಾಯಿದೆಯನ್ನು ದಲಿತರ ಪರವಾಗಿ ಅನುಷ್ಠಾನಕ್ಕೆ ತರುವಲ್ಲಿ ಜನಪ್ರತಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ. ರಾಜ್ಯ ಸರಕಾರದಿಂದ ದಲಿತರಿಗೆ ಮಂಜೂರಾದ ಸರಕಾರಿ ಭೂಮಿಯನ್ನು ಅಕ್ರಮವಾಗಿ ದಲಿತೇತರರಿಗೆ ನೀಡಲಾಗಿದೆ. ಅಂತಹ ಭೂಮಿಯನ್ನು ಮತ್ತೆ ಮೂಲ ವಾರಸುದಾರರಿಗೆ ಕೊಡಿಸಬೇಕು,'' ಎಂದು ಆಗ್ರಹಿಸಿದರು.

ಸಮತಾ ಸೈನಿಕ ದಳದ ಸಮತಾ ಸೈನಿಕಾ ದಳದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಮಾತನಾಡಿ, 'ಈ ಕಾಯಿದೆಯಿಂದ ಕೋಟ್ಯಂತರ ದಲಿತ ಕುಟುಂಬಗಳು ಸ್ವಾವಲಂಬಿ ಬದುಕನ್ನು ಕಂಡುಕೊಂಡಿವೆ. ಆದರೆ ಕಾಯಿದೆಯನ್ನು ಬಲಪಡಿಸಬೇಕಾದ ಅಗತ್ಯವಿದೆ, ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ