ಆ್ಯಪ್ನಗರ

ಪಾಪ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗ್ತಿಲ್ಲ; ಅಸೂಯೆಗೆ ಮದ್ದು ಇದ್ಯಾ? ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar On BJP : ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಬಗ್ಗೆ ಕಿಡಿಕಾರುತ್ತಿರುವ ಬಿಜೆಪಿ ನಾಯಕರ ವಿರುದ್ಧ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ. ಪಾಪ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಅಸೂಯೆಗೆ ಎಲ್ಲಾದ್ರೂ ಮದ್ದು ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇಷ್ಟೆಲ್ಲಾ ಮಾತನಾಡುವ ಬಿಜೆಪಿಯವರು ಮೊದಲು ಜನರ ಖಾತಗೆ 15 ಲಕ್ಷ ರೂ. ಹಾಕಲಿ, ಬಳಿಕ ಮಾತನಾಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

Authored byಅವಿನಾಶ ವಗರನಾಳ | Vijaya Karnataka Web 7 Jun 2023, 1:44 pm
ಬೆಂಗಳೂರು : ಪಾಪ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಮೊದಲು ಬಿಜೆಪಿಯವರು ಎಲ್ಲರ ಖಾತೆ 15 ಲಕ್ಷ ರೂ. ಹಾಕಲಿ, ಆಮೇಲೆ ಮಾತನಾಡಲಿ. ನಮ್ಮ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಬ್ಬರಿಗೆ ಒಂದು ರೂಪಾಯಿ ಕೊಡಬೇಕೆಂದರು ಅಕೌಂಟಿಬಿಲಿಟಿ ಬೇಕು. ಸುಮ್ಮನೇ ಕೊಡಲು ಸಾಧ್ಯವಾಗುತ್ತಾ? ಯೋಜನೆ ಎಲ್ಲರಿಗೂ ಸರಿಯಾಗಿ ತಲುಪಬೇಕು. ಬಡವರಿಗೆ ಗ್ಯಾರಂಟಿ ಯೋಜನೆ ನೀಡಬೇಕೆಂದು ತೀರ್ಮಾನಿಸಿದ್ದೇವು ಎಂದರು.

ಟ್ಯಾಕ್ಸ್ ಕಟ್ಟುವವರು 2 ಸಾವಿರ ರೂ. ಕೊಡಿ ಎಂದು ಕೇಳುವುದಿಲ್ಲ. 2 ಸಾವಿರ ರೂ. ಹಣ ಬೇಡ ಎಂದು ಬಹಳ ಜನ ಪತ್ರ ಬರೆದಿದ್ದಾರೆ. ಯಾರು ವೋಟರ್ ಐಡಿ ಇಟ್ಕೊಂಡಿರ್ತಾರೆ, ಯಾರತ್ರ ಆಧಾರ ಕಾರ್ಡ್ ಇದೆ, ಯಾರು ಬ್ಯಾಂಕ್ ಅಕೌಂಟ್ ಇಟ್ಕೊಂಡಿದ್ದಾರೆ, ಮನೆ ಸಂಸಾರ ಯಾರೋ‌ ನಡೆಸ್ತಿರ್ತಾರೆ. ನಾವು ಅವರ ಮನೆ ವಿಚಾರದಲ್ಲಿ ಮೂಗು ತೂರಿಸಲಾಗಲ್ಲ. ಯೋಜನೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಮೊದಲು ಜನರ ಖಾತೆಗೆ 15 ಲಕ್ಷ ರೂ. ಹಾಕಲಿ!

ಪಾಪ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಪಾಪ ಬಿಜೆಪಿಯವರು ಅಷ್ಟು ಮಾತನಾಡ್ತಾರೆ. ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಕೊಡ್ತೀವಿ ಎಂದಿದ್ದರು. ಮೊದಲು ಬಿಜೆಪಿಯವರು ಎಲ್ಲರ ಖಾತೆ 15 ಲಕ್ಷ ರೂ. ಹಾಕಲಿ. ಆಮೇಲೆ ಬೇಕಾದರೆ ಅವರು ಮಾತನಾಡಲಿ. ನಾವು ಭರವಸೆ ಕೊಟ್ಟಿದ್ದೇವೆ, ಜಾರಿ ಮಾಡುತ್ತೇವೆ ಎಂದು ಹೇಳಿದರು.

ಎಲ್ಲರ ಖಾತೆಗೆ 15 ಲಕ್ಷ ಹಾಕಲಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡಲಿ: ಗ್ಯಾರಂಟಿ ಟೀಕೆಗೆ ಡಿಕೆಶಿ ತಿರುಗೇಟು
ಎಲ್ಲರ ಅಕೌಂಟಿಗೆ 15 ಲಕ್ಷ ರೂ. ಹಣ ಹಾಕಿಸಲಿ, ಪಾಪ ನೀವ್ಯಾರು ಅದನ್ನೂ ಕೇಳ್ತಾನೇ ಇಲ್ಲ. ಪ್ರತಿಭಟನೆ ಮಾಡ್ತೇವೆ ಎಂದು ಬಿಜೆಪಿಯವರು ಹೇಳಿದರು. ಪ್ರತಿಭಟನೆ ಮಾಡೋರನ್ನ ಬೇಡ ಅನ್ನೋಕೆ ಆಗುತ್ತಾ? ಡಿಕೆ ಶಿವಕುಮಾರ್‌ ಕೇಳ್ತಿದ್ದಾರೆ 15 ಲಕ್ಷ ರೂ. ಅನ್ನು ಜನರಿಗೆ ಹಾಕಿಸಿ ಎಂದು ಮೊದಲು ನೀವು ಬಿಜೆಪಿಯವರನ್ನು ಕೇಳಿ. ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಕೇಳಿ, ಖಾಸಗಿ ಉದ್ಯೋಗ ಎಷ್ಟು ಕೊಟ್ಟಿದ್ದಾರೆ ಕೇಳಿ ಎಂದು ಡಿಕೆ ಶಿವಕುಮಾರ್‌ ಪ್ರಶ್ನಿಸಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ