ಆ್ಯಪ್ನಗರ

ದೆಹಲಿ ವಿವಾದ: ಬಿಎಸ್‌ವೈ ಭೇಟಿಯಾಗಿ ಸವದಿ ನೀಡಿದ ಸ್ಪಷ್ಟನೆ ಏನು?

ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ ಸವದಿ ಬಿಎಸ್‌ವೈ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Vijaya Karnataka Web 30 Jul 2020, 11:09 am
ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಉದ್ದೇಶ ಸವದಿ ದೆಹಲಿ ಭೇಟಿಯ ಹಿಂದೆ ಇದೆ ಎಂದೇ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದೆಹಲಿಯಿಂದ ವಾಪಸಾದ ಸವದಿ ಗುರುವಾರ ಬೆಳಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
Vijaya Karnataka Web bsy and savadi


ಗುರುವಾರ ಬೆಳಗ್ಗೆ ಸಿಎಂ ಬಿಎಸ್‌ವೈ ಕಾವೇರಿ ನಿವಾಸಕ್ಕೆ ಆಗಮಿಸಿದ್ದ ಸವದಿ ಕೆಲಹೊತ್ತು ಬಿಎಸ್‌ವೈ ಜೊತೆಗೆ ಚರ್ಚೆ ನಡೆಸಿದರು. ದೆಹಲಿ ಭೇಟಿಯ ಸುತ್ತ ಹುಟ್ಟಿಕೊಂಡಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಸಿಎಂ ಪಟ್ಟ ಪಡೆಯಲೋ, ಡಿಸಿಎಂ ಸ್ಥಾನ ಉಳಿಸಿಕೊಳ್ಳಲೋ? ಸವದಿ ದೆಹಲಿ ಭೇಟಿ ನೈಜ ಉದ್ದೇಶವೇನು?

ಲಕ್ಷ್ಮಣ ಸವದಿ ದೆಹಲಿಗೆ ತೆರಳುತ್ತಿದ್ದಂತೆ ಅವರ ಕ್ಷೇತ್ರದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಮುಂದಿನ ಸಿಎಂ ಎಂದು ಅಭಿಯಾನ ನಡೆಸಿದ್ದರು. ಸಾಕಷ್ಟು ಮಂದಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಬೆಂಬಲ ಸೂಚಿಸಿದ್ದರು. ಮಾಧ್ಯಮಗಳಲ್ಲೂ ಇದು ಭಾರೀ ಸುದ್ದಿಯಾಗಿತ್ತು.

ಅದರಲ್ಲೂ ಬಿಎಸ್‌ ಯಡಿಯೂರಪ್ಪ ಸರ್ಕಾರದ ಒಂದು ವರ್ಷದ ಸಾಧನಾ ಸಮಾವೇಶದಲ್ಲಿ ಸವದಿ ಭಾಗಿಯಾಗಿರಲಿಲ್ಲ. ಇಬ್ಬರು ಡಿಸಿಎಂಗಳು ಭಾಷಣ ಮಾಡಿದರೂ ಸವದಿ ಕಾರ್ಯಕ್ರಮದಲ್ಲಿಕಾಣಿಸಿಕೊಂಡಿರಲಿಲ್ಲ. ಆದರೆ ಇದೇ ಸಮಯಕ್ಕೆ ದೆಹಲಿಗೆ ತೆರಳಿದ್ದು ಕೇಂದ್ರ ನಾಯಕರನ್ನು ಭೇಟಿಯಾಗಿದ್ದರು.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ಬಿಎಸ್‌ವೈ ಬೆಂಬಲಕ್ಕೆ ನಿಂತ ಆರ್‌. ಅಶೋಕ್‌

ಜೊತೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಗುರುವಾರ ಬಿಎಸ್‌ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಸವದಿ ಅವರ ಜೊತೆಗೆ ಮಾತುಕತೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ