ಆ್ಯಪ್ನಗರ

ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳ ಸಹಿತ ಮೂವರು ಬಲಿ

ಕೋಲಾರದ ವಡಗೂರು ಗೇಟ್‌ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿಗಳ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Vijaya Karnataka Web 23 Mar 2018, 9:46 am
ಕೋಲಾರ : ವಡಗೂರು ಗೇಟ್‌ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿಗಳ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web death by accident in kolar
ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳ ಸಹಿತ ಮೂವರು ಬಲಿ


ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಭವಿಸಿದ ಈ ದುರಂತಕ್ಕೆ ಕಾರು ಚಾಲಕನ ಯಮವೇಗವೇ ಕಾರಣ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಂಬೋಡಿ ಸರಕಾರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ನಾರಾಯಣಸ್ವಾಮಿ, 7ನೇ ತರಗತಿಯ ವಿದ್ಯಾರ್ಥಿ ಸುದರ್ಶನ್‌ ಹಾಗೂ ದ್ವಿಚಕ್ರವಾಹನ ಸವಾರ ವಡಗೂರಿನ ವೆಂಕಟಪ್ಪ(25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬ ವಿದ್ಯಾರ್ಥಿ ವಿಜಯಕುಮಾರ್‌ ಮತ್ತು ದ್ವಿಚಕ್ರವಾಹನ ಸವಾರ ಸುಬ್ರಮಣಿ ಅವರನ್ನು ನಗರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಹೇಗಾಯಿತು ?

ಕೆಂಬೋಡಿಯಲ್ಲಿ ಶಾಲೆ ಮುಗಿಸಿ ಮನೆಗೆ ತೆರಳಲು ವಿದ್ಯಾರ್ಥಿಗಳು ವಡಗೂರು ಗೇಟ್‌ನ ಪುಟ್‌ಪಾತ್‌ನಲ್ಲಿ ನಿಂತಿದ್ದರು. ಈ ಸಂದರ್ಭ ವಡಗೂರು ಕಡೆಯಿಂದ ಬಂದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿತು. ಹೆದ್ದಾರಿಯಲ್ಲಿ ಮುಳಬಾಗಲು ಕಡೆಯಿಂದ ವೇಗವಾಗಿ ಬರುತ್ತಿದ್ದ ಆಂಧ್ರಪ್ರದೇಶ ನೋಂದಣಿ ಹೊಂದಿದ (ಎಪಿ 03 ಸಿಕೆ 5823) ಹೋಂಡಾ ಸಿಟಿ ಕಾರು ದಿಚಕ್ರ ವಾಹನಕ್ಕೆ (ಕೆಎ 07 ಯು 0364) ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ರಸ್ತೆ ಬದಿ ಬಸ್‌ಗಾಗಿ ಕಾದು ನಿಂತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ನುಗ್ಗಿತಲ್ಲದೆ, ಅಡ್ಡ ಬಂದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆಯಿತು.

ಭುಗಿಲೆದ್ದ ಸಾರ್ವಜನಿಕ ಆಕ್ರೋಶ


ವಿದ್ಯಾರ್ಥಿಗಳು ಸೇರಿದಂತೆ ಮೂವರ ಸಾವಿನಿಂದ ಆಕ್ರೋಶಗೊಂಡ ಸುತ್ತಮುತ್ತಲ ಗ್ರಾಮಸ್ಥರು, ರಾಷ್ಟ್ರೀಯ ಹೆದ್ದಾರಿಯನ್ನು ದಿಢೀರನೇ ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 1 ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ವಡಗೂರು ಗೇಟ್‌ ಬಳಿ ಅಂಡರ್‌ ಪಾಸ್‌ ನಿರ್ಮಿಸುವಂತೆ ಆಗ್ರಹಿಸಿ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾರಣ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ