ಆ್ಯಪ್ನಗರ

ಶನಿವಾರದವರೆಗೆ ವಿಧಾನಸಭಾ ಅಧಿವೇಶನ ನಡೆಸಲು ಸದನ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ ಕಾರಣ ಸದನ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಸುಮಾರು ಒಂದು ಗಂಟೆಗಳ ಕಾಲ ನಡೆದ ಬಿಎಸಿ ಸಭೆಯಲ್ಲಿ ಶನಿವಾರದವರೆಗೆ ಸದನ ನಡೆಸಲು ತೀರ್ಮಾನ ಮಾಡಲಾಗಿದೆ.

Vijaya Karnataka Web 21 Sep 2020, 3:07 pm
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಕಾಯಿಲೆಯ ಕಾರಣದಿಂದ ವಿಧಾನಮಂಡಲದ ಅಧಿವೇಶನವನ್ನು ಮೊಟಕುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ವಿಧಾನಸಭಾ ಅಧಿವೇಶನವನ್ನು 3 ದಿನಕ್ಕೆ ಸೀಮಿತಗೊಳಿಸುವ ಸಂಬಂಧ ಸಿಎಂ ಯಡಿಯೂರಪ್ಪ ಅವರೇ ಪ್ರತಿಪಕ್ಷದ ನಾಯಕರಿಗೆ ಕರೆ ಮಾಡಿ ಸಹಕಾರ ಕೋರಿದ್ದರು.
Vijaya Karnataka Web Session


ಅಧಿವೇಶನ ಮೊಟಕುಗೊಳಿಸಲು ಕಾಂಗ್ರೆಸ್‌ ವಿರೋಧ; ಕನಿಷ್ಠ 15 ದಿನಗಳ ಕಾಲ ಸದನ ನಡೆಸುವಂತೆ ಆಗ್ರಹ

ಆದರೆ ಸರ್ಕಾರದ ಚಿಂತನೆಗೆ ವಿಪಕ್ಷ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿ ಒಂದೋ ಕನಿಷ್ಠ 15 ದಿನಗಳ ಕಾಲ ಸದನ ನಡೆಸಿ ಅಥವಾ ಮಸೂದೆಗಳನ್ನು ಮಂಡನೆ ಮಾಡಬೇಡಿ ಎಂದು ಆಗ್ರಹಿಸಿತ್ತು. ನಂತರ ಈ ವಿಚಾರಕ್ಕೆ ಸಂಬಂಧಿಸಿದಂತೆ ಸದನ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಇದೀಗ ಸಭೆಯಲ್ಲಿ ನಿರ್ಧಾರ ಮಾಡಿದಂತೆ ಕಲಾಪವನ್ನು ಒಟ್ಟು ಆರು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ.

‘ಸಿದ್ರಾಮಯ್ಯನೋರೇ, ನಿಮ್ಗೆ ಯಾರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ?’; ಕೆಎಸ್‌ ಈಶ್ವರಪ್ಪ

ಸದನ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಇಂದಿನಿಂದ ಆರಂಭಗೊಂಡಿರುವ ವಿಧಾನಮಂಡಲ ಮಳೆಗಾಲದ ಅಧಿವೇಶನ ಶನಿವಾರದವರೆಗೆ ನಡೆಯಲಿದೆ. ಆರಂಭದಲ್ಲಿ ಒಟ್ಟು ಎಂಟು ದಿನಗಳ ಕಾಲ ಅಧಿವೇಶನ ನಡೆಸಲು ಸರ್ಕಾರ ಸಮಯ ನಿಗದಿ ಪಡಿಸಿತ್ತು. ಆದರೆ ಕೊರೊನಾ ಕಾರಣಕ್ಕಾಗಿ ಅಧಿವೇಶನ ಮೊಟಕುಗೊಳಿಸಲು ಸರ್ಕಾರ ಮುಂದಾಗಿತ್ತು.

‘ನಿನಗೆ ಯಾವ ಕೆಲಸ ಮಾಡೋ ಯೋಗ್ಯತೆ ಇಲ್ಲ’ ವಿಧಾನಸೌಧದಲ್ಲಿ ಪರಸ್ಪರ ಹೊಡೆದಾಟಕ್ಕೆ ಮುಂದಾದ ಬಿಜೆಪಿ ನಾಯಕರು..!

ಆದರೆ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ ಕಾರಣ ಸದನ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಸುಮಾರು ಒಂದು ಗಂಟೆಗಳ ಕಾಲ ನಡೆದ ಬಿಎಸಿ ಸಭೆಯಲ್ಲಿ ಶನಿವಾರದವರೆಗೆ ಸದನ ನಡೆಸಲು ತೀರ್ಮಾನ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ