ಆ್ಯಪ್ನಗರ

ಮಾನನಷ್ಟ ಮೊಕದ್ದಮೆ ವಿಚಾರ, ನ್ಯಾಯಾಲಯಕ್ಕೆ ದಂಡ ತೆತ್ತ ಸಂಸದೆ ಶೋಭಾ

ಪಿಎಫ್ ಐ ಸಂಘಟನೆಯನ್ನು ಶೋಭಾ ಕರಂದ್ಲಾಂಜೆ ಟೀಕಿಸಿದ್ದಾರೆ ಎಂದು ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ ಶೋಭಾ ಕರಂದ್ಲಾಜೆಗೆ ನ್ಯಾಯಾಲಯ ದಂಡ ವಿಧಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Vijaya Karnataka Web 11 Oct 2019, 2:16 pm
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರವಾಗಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಬಾ ಕರಂದ್ಲಾಜೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಂಡ ಹಾಕಿ ಷರತ್ತುಬದ್ಧ ಜಾಮೀನು ನೀಡಿದೆ.
Vijaya Karnataka Web shobha


ಪಿಎಫ್ ಐ ಸಂಘಟನೆ ಬಗ್ಗೆ ಶೋಭಾ ಕರಂದ್ಲಾಂಜೆ ಟೀಕೆ ಮಾಡಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಜಾಮೀನು ಮಂಜೂರು ಮಾಡಿದ ನ್ಯಾಯಾಲಯ ರೂ 200 ದಂಡ ವಿಧಿಸಿ , ನ್ಯಾಯಾಲಯಕ್ಕೆ ರೂ 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ರೂ 10 ಸಾವಿರ ನಗದು ಭದ್ರತೆ ಒದಗಿಸಬೇಕೆಂದು ಷರತ್ತುಬದ್ಧ ಜಾಮೀನು ನೀಡಿತು.

ಪ್ರಕರಣಕ್ಕೆ ಸಂಬಂಧಿಸಿ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರ ಮುಂದೆ ಶೋಭಾ ಖುದ್ದು ಹಾಜರಾಗಿದ್ದರು. ಶೋಭಾ ಪರವಾಗಿ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ